ಮುರ್ಡೇಶ್ವರ : ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗಿರುವ ಘೋರ ಘಟನೆ ನಡೆದಿದೆ.
ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮುರುಡೇಶ್ವರ ಬೀಚ್ನಲ್ಲಿ ಆಟವಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂರು ಜನ ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃದೇಹವನ್ನು ಹೊರತೆಗೆಯಲಾಗಿದೆ. ನೀರಿನಲ್ಲಿ ಮುಳುಗಿದ್ದ ಮೂವರು ವಿದ್ಯಾರ್ಥಿನಿಯರನ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನುಳಿದಂತೆ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ. ಘಟನೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕರ ನಿರ್ಲಕ್ಷ್ಯದಿಂದಲೇ ವಿದ್ಯಾರ್ಥಿನಿ ಸಾವು, ಉಳಿದ ಮೂವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…