ಮುರ್ಡೇಶ್ವರ : ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗಿರುವ ಘೋರ ಘಟನೆ ನಡೆದಿದೆ.
ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮುರುಡೇಶ್ವರ ಬೀಚ್ನಲ್ಲಿ ಆಟವಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂರು ಜನ ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃದೇಹವನ್ನು ಹೊರತೆಗೆಯಲಾಗಿದೆ. ನೀರಿನಲ್ಲಿ ಮುಳುಗಿದ್ದ ಮೂವರು ವಿದ್ಯಾರ್ಥಿನಿಯರನ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನುಳಿದಂತೆ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ. ಘಟನೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕರ ನಿರ್ಲಕ್ಷ್ಯದಿಂದಲೇ ವಿದ್ಯಾರ್ಥಿನಿ ಸಾವು, ಉಳಿದ ಮೂವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…