ಮುರ್ಡೇಶ್ವರ : ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗಿರುವ ಘೋರ ಘಟನೆ ನಡೆದಿದೆ.
ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮುರುಡೇಶ್ವರ ಬೀಚ್ನಲ್ಲಿ ಆಟವಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂರು ಜನ ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃದೇಹವನ್ನು ಹೊರತೆಗೆಯಲಾಗಿದೆ. ನೀರಿನಲ್ಲಿ ಮುಳುಗಿದ್ದ ಮೂವರು ವಿದ್ಯಾರ್ಥಿನಿಯರನ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನುಳಿದಂತೆ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ. ಘಟನೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕರ ನಿರ್ಲಕ್ಷ್ಯದಿಂದಲೇ ವಿದ್ಯಾರ್ಥಿನಿ ಸಾವು, ಉಳಿದ ಮೂವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…