ಉಡುಪಿ

ಮುಲ್ಕಿ:ಕೊರೊನಾ ನಿಯಂತ್ರಣದ ಹೆಸರಿನಲ್ಲಿ ರಾಜ್ಯ ಸರಕಾರದಿಂದ 3000 ಕೋಟಿ ರೂ. ಭ್ರಷ್ಟಾಚಾರ : ಅಭಯಚಂದ್ರ ಜೈನ್ ಆರೋಪ -Vishwanews24

ಮುಲ್ಕಿ:ಕೊರೊನಾ ನಿಯಂತ್ರಣದ ಹೆಸರಿನಲ್ಲಿ ರಾಜ್ಯ ಸರಕಾರದಿಂದ 3000 ಕೋಟಿ ರೂ. ಭ್ರಷ್ಟಾಚಾರ : ಅಭಯಚಂದ್ರ ಜೈನ್ ಆರೋಪ -Vishwanews24

ಮುಲ್ಕಿ: ಬಿಜೆಪಿ ರಾಜ್ಯ ಸರಕಾರ ಕಳೆದ ಕೆಲ ತಿಂಗಳಿನಿಂದ ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಸುಮಾರು 3000 ಕೋಟಿ ರೂ.ಗಳ ಬೃಹತ್ ಭ್ರಷ್ಟಾಚಾರ ನಡೆಸಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಗಂಭೀರ ಆರೋಪ ಮಾಡಿದ್ದಾರೆ.

ಅವರು ಗುರುವಾರ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸ್ ಅವರ ಜನ್ಮದಿನಾಚರಣೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿರ್ದೇಶನದಂತೆ ಬಿಜೆಪಿ ನಾಯಕತ್ವದ ಕರ್ನಾಟಕ ಸರ್ಕಾರ ಕೊರೊನಾ ನಿಯಂತ್ರಣದಲ್ಲಿ ನಡೆಸಿದ ಭ್ರಷ್ಟಾಚಾರ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೈಗಾರಿಕಾ ವಿವಾದ ಕಾಯ್ದೆ ತಿದ್ದುಪಡಿ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿರುವುದನ್ನು ವಿರೋಧಿಸಿ ಮತ್ತು ಅತಿವೃಷ್ಟಿ ನಿರ್ವಹಣೆಯಲ್ಲಿ ವೈಫಲ್ಯ ಗಳ ವಿರುದ್ಧ ‘ಜನಧ್ವನಿ’ ಮೂಲಕ ಮುಲ್ಕಿ ತಹಶೀಲ್ದಾರ್ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಕೋವಿಡ್ 19ನಿಂದ ಎಲ್ಲಾ ಉದ್ಯಮಗಳು ಕೈ ಕೊಟ್ಟಿದ್ದು , ಆರ್ಥಿಕ ವ್ಯವಸ್ಥೆ ಸಂಪೂರ್ಣ ಕುಸಿದಿದ್ದರೂ ಯಾವುದನ್ನೂ ಲೆಕ್ಕಿಸದ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಬಿಜೆಪಿ ಸರಕಾರ ಆಪರೇಷನ್ ಕಮಲ ಮಾಡುವ ಮುಖಾಂತರ ಭ್ರಷ್ಟಾಚಾರದ ಮೂಲಕವೇ ಆಡಳಿತಕ್ಕೆ ಬಂದು ಲಜ್ಜೆಗೇಡಿತನದ ರಾಜಕಾರಣ ನಡೆಸಿದೆ. ಆಡಳಿತದ ಪ್ರತಿಯೊಂದರಲ್ಲಿಯೂ ಭ್ರಷ್ಟಾಚಾರ ನಡೆಸುತ್ತಿರುವ ಬಿಜೆಪಿಗರಿಗೆ ಜನರೇ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು. ಕೋವಿಡ್ 19 ನಿಯಂತ್ರಣದ ವಸ್ತುಗಳನ್ನು ಖರೀದಿಸಿ ವ್ಯಾಪಕ ಭ್ರಷ್ಟಾಚಾರ ನಡೆಸಿದ ಬಿಜೆಪಿ ಸರಕಾರದ ವಿರುದ್ಧ ತನಿಖೆ ನಡೆಸಬೇಕೆಂದೂ ಒತ್ತಾಯಿಸಿದರು.

ಕೆಪಿಸಿಸಿ ಸದಸ್ಯ ವಸಂತ ಬೆರ್ನಾಡ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಕಾಂಗ್ರೆಸ್ ನಾಯಕರಾದ ಮಯ್ಯದ್ದಿ ಪಕ್ಷಿಕೆರೆ, ಫಿಲೋಮಿನಾ ಸಿಕ್ವೇರಾ, ಧರ್ಮಾನಂದ ತೋಕೂರು, ಕುಳಾಯಿ ಬಶೀರ್, ಮಂಜುನಾಥ ಕಂಬಾರ, ಭೀಮಾಶಂಕರ, ಧನರಾಜ್ ಸಸಿಹಿತ್ಲು, ವೀರಯ್ಯ ಹಿರೇಮಠ, ಪದ್ಮಾವತಿ ಶೆಟ್ಟಿ, ವಹೀದಾ ಬಾನು, ಮುನ್ನ ಯಾನೆ ಮಹೇಶ, ಬಂದಗಿ ಸಾಬ್ ಕೆ.ಎಸ್ . ರಾವ್ ನಗರ, ಅಬ್ದುಲ್ ಅಜೀಜ್ ಹಳೆಯಂಗಡಿ, ಶಂಕರ್ ಪಡಂಗ, ಅನಿಲ್ ಸಸಿಹಿತ್ಲು, ಜಾಕ್ಸನ್ ಪಕ್ಷಿಕೆರೆ, ದಯಾನಂದ ಮಟ್ಟು, ಸಮೀರ್ ಕೆ.ಎಸ್ .ರಾವ್ ನಗರ , ಸುನಿತಾ ಕಿನ್ನಿಗೋಳಿ, ರಕ್ಷಿತ್ ಕೊಳಚಿಕಂಬಳ ಮತ್ತಿತರರು ಭಾಗವಹಿಸಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago