ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ.
ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಯುವಕ ಫಯಿಮ್ ಎಂಬಾತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಫಾಮ್ ಎಂಬವರ ರೂಮ್ಗೆ ಬಂದಿದ್ದ.
ಆ ಸಂದರ್ಭ ಕೊಲಕಾಡಿ ಮೂಲದ ಯುವತಿ ಜೊತೆ ಮಾತನಾಡುತ್ತಾ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಸ್ಥಳೀಯರಿಗೆ ಸಂಶಯ ಬಂದು ವಿಚಾರಿಸಿದ್ದು, ಕೂಡಲೇ ಯುವತಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಇದನ್ನೂ ಓದಿ : ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಈ ಸಂದರ್ಭ ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದ್ದು ಸ್ಥಳೀಯರು ಆರೋಪಿಗಳಿಗೆ ಗೂಸಾ ಇಕ್ಕಿದ್ದಾರೆ.
ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಇನ್ನು ಆರೋಪಿ ಫಯೀಮ್ ಕಟಪಾಡಿಯಲ್ಲಿ ನೆಲೆಸಿದ್ದು ಇಬ್ಬರು ಮಕ್ಕಳ ತಂದೆಯಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಈತ ಕಾರ್ನಾಡುವಿನಲ್ಲಿ ಸೆಲೂನ್ ಅಂಗಡಿ ನಡೆಸುತ್ತಿದ್ದು ಬದಿಯಲ್ಲಿದ್ದ ಫ್ಯಾನ್ಸಿ ಸೆಂಟರ್ ನಲ್ಲಿ ಇದೇ ಯುವತಿ ಕೆಲಸ ಮಾಡುತ್ತಿರುವಾಗ ಸ್ನೇಹ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ.
ಈ ಘಟನೆಯಿಂದ ಮುಲ್ಕಿ ಪರಿಸರ ಬೂದಿ ಮುಚ್ಚಿದ ಕೆಂಡದಂತಿದ್ದು ಠಾಣೆಯ ಹೊರಬದಿಯಲ್ಲಿ ಸಂಘಟನೆಯ ನಾಯಕರು ಸೇರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ : ಉಡುಪಿ : ಕಡಿಯಾಳಿ ತಿರುಗುವ ಮುಚ್ಚಿಗೆ ರಚಿಸಿದ್ದ ಶಿಲ್ಪಿ ಸುದರ್ಶನ ಆಚಾರ್ಯರಿಗೆ ‘ಎಸ್ಕೆ ಜಿಐ-ಫಾಲ್ಕೆ’ ಪ್ರಶಸ್ತಿ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…