Featured

ಮುಲ್ಕಿ ಆಟೋ ರಿಕ್ಷಾ ಚಾಲಕ ಕೊಲೆ ಪ್ರಕರಣ :  ಇಬ್ಬರು ಪೊಲೀಸ್ ವಶಕ್ಕೆ – vishwanews24

ಮುಲ್ಕಿ ಆಟೋ ರಿಕ್ಷಾ ಚಾಲಕ ಕೊಲೆ ಪ್ರಕರಣ :  ಇಬ್ಬರು ಪೊಲೀಸ್ ವಶಕ್ಕೆ

ಕಾಸರಗೋಡು: ಮೂಲ್ಕಿ ಮೂಲದ ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ ಎಂಬವರನ್ನು ಕೊಲೆ ಗೈದು ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರೂ ಮಂಗಳೂರು ನಿವಾಸಿಗಳು ಎಂದು ತಿಳಿದುಬಂದಿದೆ. ಮುಹಮ್ಮದ್ ಶರೀಫ್ ರವರ ಮೃತದೇಹ ಕುಂಜತ್ತೂರು ಪದವು ಎಂಬಲ್ಲಿ ಬಾವಿಯಲ್ಲಿ ಪತ್ತೆಯಾಗಿತ್ತು. ಮಂಗಳೂರಿನಿಂದ ಮೂವರು ರಿಕ್ಷಾ ಬಾಡಿಗೆಗೆ ಪಡೆದು ತೆರಳಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

ಶರೀಫ್ ರವರ ಆಟೋ ರಿಕ್ಷಾ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಮಂಜೇಶ್ವರ ಕಡೆಗೆ ಬರುತ್ತಿರುವುದು ತಲಪಾಡಿಯಲ್ಲಿನ ಸಿಸಿ ಟಿವಿ ಕ್ಯಾಮೆರ ದೃಶ್ಯ ಸಿಕ್ಕಿತ್ತು. ಈ ಎಲ್ಲಾ ಮಾಹಿತಿಗಳನ್ನು ಕೇಂದ್ರೀಕರಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಗುರುವಾರ ರಾತ್ರಿ ಶರೀಫ್ ರವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿತ್ತು. ಸಂಶಯಾಸ್ಪದವಾಗಿ ನಿರ್ಜನ ಸ್ಥಳದಲ್ಲಿ ಆಟೋರಿಕ್ಷಾ ಕಂಡುಬಂದ ಹಿನ್ನಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಕೊಲೆಗೈದು ಬಾವಿಗೆಸೆದಿದ್ದರು ಎಂದು ಮರಣೋತ್ತರ ಪರೀಕ್ಷೆಯಿಂದ ದೃಡಪಟ್ಟಿತ್ತು. ಶರೀಫ್ ಅವರ ಮೃತದೇಹದ ತಲೆ, ಕೈ ಹಾಗೂ ದೇಹದ ಇತರ ಕಡೆಗಳಲ್ಲಿ ಇರಿತದ ಗಾಯಗಳು ಪತ್ತೆಯಾಗಿದ್ದವು.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

3 hours ago