ಕಾಸರಗೋಡು: ಮೂಲ್ಕಿ ಮೂಲದ ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ ಎಂಬವರನ್ನು ಕೊಲೆ ಗೈದು ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭಿಸಿದೆ.
ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರೂ ಮಂಗಳೂರು ನಿವಾಸಿಗಳು ಎಂದು ತಿಳಿದುಬಂದಿದೆ. ಮುಹಮ್ಮದ್ ಶರೀಫ್ ರವರ ಮೃತದೇಹ ಕುಂಜತ್ತೂರು ಪದವು ಎಂಬಲ್ಲಿ ಬಾವಿಯಲ್ಲಿ ಪತ್ತೆಯಾಗಿತ್ತು. ಮಂಗಳೂರಿನಿಂದ ಮೂವರು ರಿಕ್ಷಾ ಬಾಡಿಗೆಗೆ ಪಡೆದು ತೆರಳಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.
ಶರೀಫ್ ರವರ ಆಟೋ ರಿಕ್ಷಾ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಮಂಜೇಶ್ವರ ಕಡೆಗೆ ಬರುತ್ತಿರುವುದು ತಲಪಾಡಿಯಲ್ಲಿನ ಸಿಸಿ ಟಿವಿ ಕ್ಯಾಮೆರ ದೃಶ್ಯ ಸಿಕ್ಕಿತ್ತು. ಈ ಎಲ್ಲಾ ಮಾಹಿತಿಗಳನ್ನು ಕೇಂದ್ರೀಕರಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಗುರುವಾರ ರಾತ್ರಿ ಶರೀಫ್ ರವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿತ್ತು. ಸಂಶಯಾಸ್ಪದವಾಗಿ ನಿರ್ಜನ ಸ್ಥಳದಲ್ಲಿ ಆಟೋರಿಕ್ಷಾ ಕಂಡುಬಂದ ಹಿನ್ನಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಕೊಲೆಗೈದು ಬಾವಿಗೆಸೆದಿದ್ದರು ಎಂದು ಮರಣೋತ್ತರ ಪರೀಕ್ಷೆಯಿಂದ ದೃಡಪಟ್ಟಿತ್ತು. ಶರೀಫ್ ಅವರ ಮೃತದೇಹದ ತಲೆ, ಕೈ ಹಾಗೂ ದೇಹದ ಇತರ ಕಡೆಗಳಲ್ಲಿ ಇರಿತದ ಗಾಯಗಳು ಪತ್ತೆಯಾಗಿದ್ದವು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…