ಮುಲ್ಕಿ: ಕಾರು ಢಿಕ್ಕಿಯಾಗಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದ್ದು ಗಾಯಾಳು ಬೈಕ್ ಸವಾರನನ್ನು ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ (21)ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ್ನು ಕಾರು ದೂಡಿಕೊಂಡು ಹೋಗಿದ್ದು ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ. ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…
ಶಿರ್ವ : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…