ಮುಲ್ಕಿ: ಇಲ್ಲಿನ ವಿಜಯ ಕಾಲೇಜು ಪಿಯುಸಿ ವಿದ್ಯಾರ್ಥಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಮುಲ್ಕಿ ಸಮೀಪದ
ಕಕ್ವ ಪಲ್ಕೆ ನಿವಾಸಿ ಕಿಶನ್ ಆಚಾರ್ಯ (18) ಎಂದು ಗುರುತಿಸಲಾಗಿದೆ.
ಮೃತ ವಿದ್ಯಾರ್ಥಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು ಮಂಗಳವಾರ ಕಕ್ಕದಲ್ಲಿರುವ ಪಕ್ಕದ ದೊಡ್ಡಪ್ಪನ ಮನೆಯ ಕೋಣೆಯಲ್ಲಿ ಕಿಟಕಿ ಗೆ ಸೀರೆಯ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಬಲವಾದ ಕಾರಣ ತಿಳಿದು ಬಂದಿಲ್ಲ.
ಈತ ಕಾಲೇಜಿನಲ್ಲಿ ಎಲ್ಲರ ಜೊತೆ ಒಡನಾಡಿಯಾಗಿದ್ದ ಎಂದು ತಿಳಿದು ಬಂದಿದೆ. ಈ ನಡುವೆ ಪ್ರಕರಣದ ಬಗ್ಗೆ ದೂರು ನೀಡಲು ನೂತನ ಮನೆಯವರು ಹಾಗೂ ಸಂಬಂಧಿಕರು ತೆರಳಿದಾಗ ಮುಲ್ಕಿ ಪೊಲೀಸರು ಸತಾಯಿಸಿದ್ದಾರೆ ಎಂದು ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ಆರೋಪಿಸಿದ್ದಾರೆ. ಬಳಿಕ ಶಾಸಕ ಸೂಚನೆ ಮೇರೆಗೆ ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದು ಪೊಲೀಸರು ಠಾಣೆಗೆ ದೂರು ನೀಡಲು ಹೋದರೆ ಬಡವರ ಅಸಹಾಯಕರ ವಿರುದ್ಧ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತ ಕಿಶನ್ ಆಚಾರ್ಯ ತಂದೆ ತಾಯಿ ಹಾಗೂ ಅಕ್ಕ ಅಗಲಿದ್ದಾರೆ. ಮೃತ ಕಿಶನ್ ಗೌರವಾರ್ಥ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…