ಮುಲ್ಕಿ : ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳು ಹಾಗೂ ಪತ್ನಿಯನ್ನು ಬಾವಿಗೆ ತಳ್ಳಿ ಹತ್ಯೆಗೆ ಯತ್ನಿಸಿದ್ದು, ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಿನ್ನಿಗೋಳಿ ಸಮೀಪ ನಡೆದಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸಾವನಪ್ಪಿದ್ದಾರೆ.
ಪದ್ಮನೂರು ಶೆಟ್ಟಿಗಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಶಾಲೆಯಿಂದ ಬಂದ ಮಕ್ಕಳನ್ನು ಮನೆಯ ಪಕ್ಕದಲ್ಲಿದ್ದ ಬಾವಿಗೆ ತಳ್ಳಿದ್ದಾನೆ. ಬಳಿಕ ಮನೆಗೆ ಬಂದ ಪತ್ನಿ ಹಿತೇಶ್ ಶೆಟ್ಟಿಗಾರ್ ಅವರಲ್ಲಿ ಮಕ್ಕಳ ಬಗ್ಗೆ ಕೇಳಿದಾಗ ಎಲೋ ಅಡಗಿರಬಹುದು ಎಂದು ಹೇಳಿದ್ದಾನೆ, ಮನೆಯಲ್ಲಿ ಹುಡುಕಿ ಸಿಗದಿದ್ದಾಗ ಸಮೀಪದ ಮನೆಯ ಬಾವಿ ಕಡೆ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳು ನೀರಿನಲ್ಲಿ ಕಂಡು ರಕ್ಷಣೆಗೆ ಮುಂದಾದಾಗ ಪತ್ನಿಯನ್ನು ಹಿಂಬಾಲಿಸಿಕೊಂಡು ಬಂದ ಪತಿ ಪತ್ನಿಯನ್ನೂ ಬಾವಿಗೆ ದೂಡಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪತ್ನಿ ಲಕ್ಷಿ ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾದ್ಯವಾಗದೆ ಕೂಗಿದಾಗ ರಸ್ತೆಬದಿಯಲ್ಲಿ ಹೂ ಮಾರುವವವರು ಮತ್ತು ಇಬ್ಬರು ಬಾವಿಯ ಬಳಿ ಬಂದು ಹಿತೇಶ್ ಮತ್ತು ಲಕ್ಷೀ ಅವರನ್ನು ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ. ಕೂಡಲೇ ಮೂಲ್ಕಿ ಪೋಲಿಸರಿಗೆ ಮಾಹಿತಿ ನೀಡಿದ್ದು, ಅಗ್ನಿ ಶಾಮಕದಳ ಸಹಾಯದಿಂದ ಮೂಲ್ಕಿ ಪೋಲಿಸರು ಮೂವರೂ ಮಕ್ಕಳನ್ನು ಮೆಲಕ್ಕೆತ್ತಲಾಯಿತು. ಆದರೆ ಚಿಂತಾಜನಕ ಸ್ಥಿತಿಯಲ್ಲಿ ಅಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…