ಮೂಲ್ಕಿ : ಮರುವಾಯಿ ಹೆಕ್ಕಲು ನದಿಗಳಿದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಳಚಿಕಂಬಳ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್(24) ಎಂದು ಗುರುತಿಸಲಾಗಿದೆ.
ಬಜಪೆಯ ಅದ್ಯಪಾಡಿಯ ಸುಮಾರು 10 ಯುವಕರ ತಂಡ ಮರುವಾಯಿ ಹೆಕ್ಕಲು ಆಗಮಿಸಿದ್ದು, ಅದರಲ್ಲಿ ನಾಲ್ವರು ಮರುವಾಯಿ ಹೆಕ್ಕುವುದಕ್ಕಾಗಿ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಅಳಿವೆಯ ಬಳಿ ನದಿಗೆ ಇಳಿದಿದ್ದರು. ಉಳಿದ ಆರು ಮಂದಿ ದಡದಲ್ಲಿಯೇ ಇದ್ದರು, ನೀರಿಗೆ ಇಳಿದವರಲ್ಲಿ ಈಜು ಬಾರದ ಕಾರಣ ಕೆಲವು ಯುವಕರು ನೀರಿನಲ್ಲಿ ಮುಳುಗಡೆಯಾಗುವ ಹಂತಕ್ಕೆ ಹೋಗಿದ್ದರು. ಈ ವೇಳೆ ಅಭಿಲಾಷ್ (24) ಉಳಿದವರನ್ನು ಬದುಕಿಸಲು ಹೋಗಿ ತಾನು ಜೀವ ಕಳೆದುಕೊಂಡಿದ್ದಾರೆ. ಯುವಕರ ಬೊಬ್ಬೆ ಕೇಳಿ ಧಾವಿಸಿ ಬಂದ ಮೀನುಗಾರರು ಮೂವರನ್ನು ರಕ್ಷಿಸಿದ್ದಾರೆ. ನೀರುಪಾಲಾಗಿರುವ ಅಭಿಲಾಷ್ ಪತ್ತೆಯಾಗಿಲ್ಲ.
ಕೊಳಚಿಕಂಬಳ ಬಳಿ ನದಿಯಲ್ಲಿ ನೀರು ಇಳಿತದ ಸಮಯ ಸುಮಾರು 2 ಕಿ.ಮೀ. ನದಿ ಪ್ರದೇಶ ಖಾಲಿಯಾಗಿ ಮೈದಾನದಂತಿರುತ್ತದೆ. ಈ ಸಂದರ್ಭದಲ್ಲಿ ಜನರು ಇಲ್ಲಿ ಇಳಿದು ಅಳಿವೆಯ ತನಕ ನಡೆದುಕೊಂಡು ಹೋಗುತ್ತಾರೆ. ಆದರೆ ಭರತ ಆರಂಭವಾದರೆ ನಾಲ್ಕು ದಿಕ್ಕಿನಿಂದಲೂ ಸುಮಾರು ನಾಲ್ಕೈದಡಿ ನೀರು ತುಂಬಿಕೊಳ್ಳುತ್ತಿದ್ದು, ಈ ಹಿಂದೆಯೂ ಹಲವಾರು ಅವಘಡಗಳು ಇಲ್ಲಿ ನಡೆದ ಉದಾಹರಣೆಗಳು ಇವೆ. ಈ ಬಗ್ಗೆ ಎಚ್ಚರಿಸಿ ನೀರಿಗೆ ಇಳಿಯದಂತೆ ಸೂಚಿಸಿದರೆ ಯಾರೂ ಕೇಳುವುದಿಲ್ಲ ಸ್ಥಳೀಯರು ಹೇಳುತ್ತಾರೆ
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…