Featured

ಮುಲ್ಕಿ : ರಿಕ್ಷಾ ಚಾಲಕ ಶರೀಫ್‌ರನ್ನ ಕೊಲೆಗೈದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ   – vishwanews24

ಮುಲ್ಕಿ : ರಿಕ್ಷಾ ಚಾಲಕ ಶರೀಫ್‌ರನ್ನ ಕೊಲೆಗೈದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಕುಂಜತ್ತೂರಿನ ಬಾವಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ರಿಕ್ಷಾ ಚಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ತಿರುವು

ಕಾಸರಗೋಡು: ಮಂಜೇಶ್ವರದಲ್ಲಿ ಮೂಲ್ಕಿ ನಿವಾಸಿಯಾದ ಆಟೋ ಚಾಲಕ ಮುಹಮ್ಮದ್ ಶರೀಫ್ ರವರ ನಿಗೂಡ ಸಾವು ಕೊಲೆ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ.

ಶರೀಫ್ ರವರ ಕೈ, ತಲೆ ಹಾಗೂ ಕುತ್ತಿಗೆಯಲ್ಲಿ ಮಾರಕಾಸ್ತ್ರಗಳಿಂದ ಕಡಿದ ಗಾಯಗಳಾಗಿವೆ ಎಂದು ಪರೀಕ್ಷೆಯಿಂದ ದೃಡ ಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುರುವಾರ ರಾತ್ರಿ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಪಾಳು ಬಾವಿಯಲ್ಲಿ ಶರೀಫ್ ರವರ ಮೃತದೇಹ ಪತ್ತೆಯಾಗಿತ್ತು.

ಕುತ್ತಿಗೆಯ ಬಲವಾದ ಗಾಯ ಸಾವಿಗೆ ಪ್ರಮುಖ ಕಾರಣ. ಗಂಟೆಗಳ ಕಾಲ ನೀರಿನಲ್ಲಿದ್ದರೂ ಶ್ವಾಸ ಕೋಶ ದೊಳಗೆ ನೀರು ನುಗ್ಗಿಲ್ಲ. ಇದರಿಂದ ಕೊಲೆ ಗೈದ ಬಳಿಕ ಬಾವಿಗೆ ಎಸೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮಂಜೇಶ್ವರ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತದೆ ಗುರುವಾರ ರಾತ್ರಿ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಸಂಶಯಾಸ್ಪದವಾಗಿ ಕಂಡು ಬಂದರೂ ರಿಕ್ಷಾವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ನಡೆಸಿದ ಶೋಧದಿಂದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.

ಶುಕ್ರವಾರ ಬೆಳಿಗ್ಗೆ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿ ಮಹಜರು ನಡೆಸಲಾಯಿತು. ಬುಧವಾರ ರಾತ್ರಿ ಹತ್ತು ಗಂಟೆಗೆ ಆಟೋ ರಿಕ್ಷಾವನ್ನು ಬಾಡಿಗೆಗೆಂದು ಮೂವರು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಅಂದು ರಾತ್ರಿಯಿಂದ ಮುಹಮ್ಮದ್ ಶರೀಫ್ ನಾಪತ್ತೆಯಾಗಿದ್ದರು. ಈ ಮೂವರನ್ನು ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago