ಮುಲ್ಕಿ: ಸ್ಕೂಟರ್ ಗೆ ಬುಲೆಟ್ ಬೈಕ್ ಢಿಕ್ಕಿಯಾಗಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಬೈಪಾಸ್ ಬಳಿ ನಡೆದಿದೆ.
ಗಾಯಾಳು ಸವಾರರನ್ನು ಮುಲ್ಕಿ ನಿವಾಸಿ ಸುಜನ್ ಪುತ್ರನ್ (21) ಹಾಗೂ ಕಾರ್ನಾಡ್ ನಿವಾಸಿ ಸುಜಿತ್ ಜತ್ತನ್ನ (28) ಎಂದು ಗುರುತಿಸಲಾಗಿದೆ.
ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬುಲೆಟ್ ಸವಾರ ರಾಷ್ಟ್ರೀಯ ಹೆದ್ದಾರಿ ಕಾರ್ನಾಡು ಬೈಪಾಸ್ ಬಳಿ ಕಾರ್ನಾಡ್ ಒಳ ಜಂಕ್ಷನ್ ನಿಂದ ಚಿತ್ರಾಪು ಕಡೆಗೆ ಹೆದ್ದಾರಿ ಕ್ರಾಸ್ ಮಾಡಲು ನಿಂತಿದ್ದ ವೇಳೆಯಲ್ಲಿ ಸ್ಕೂಟರ್ ಗೆ ಬಂದು ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಭಾರಿ ಶಬ್ದ ಉಂಟಾಗಿದ್ದು ಸ್ಕೂಟರ್ ಎರಡು ತುಂಡಾಗಿದೆ. ಬುಲೆಟ್ ಅಪಘಾತ ನಡೆದ ಸ್ಥಳದಿಂದ 200 ಮೀಟರ್ ದೂರಕ್ಕೆ ಹೋಗಿ ಬಿದ್ದಿದೆ.
ಅಪಘಾತದಿಂದ ಗಂಭೀರ ಗಾಯಗೊಂಡ ಇಬ್ಬರು ಸವಾರರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…