ಮುಲ್ಕಿ : ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ.
ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು ಸೀದಾ ಸರ್ವಿಸ್ ರಸ್ತೆಗೆ ನುಗ್ಗಿದೆ ಈ ವೇಳೆ ಬೈಕ್ ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ಮಗಳನ್ನು ಬಸ್ ಸ್ಟೆಂಡ್ ಗೆ ಬಿಡಲು ಬಂದಿದ್ದು ಲಾರಿ ಗುದ್ದಿದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿದ್ದು. ಮಗಳು ಸವಿತಾ ಗೆ ಸಣ್ಣ ಪುಟ್ಟ ಗಾಯ ಅಪಾಯದಿಂದ ಪಾರಾಗಿದ್ದಾರೆ.
ಅಲ್ಲದೆ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರತ್ತ ಲಾರಿ ನುಗ್ಗಿ ಬಂದಿದೆ. ಕೂದಲೆಳೆ ಅಂತರದಿಂದ ಕೂಲಿ ಕಾರ್ಮಿಕರು ಪಾರಾಗಿದ್ದು, ಕರ್ತವ್ಯದಲ್ಲಿದ್ದ ಮಹಿಳೆ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಲಾರಿ ವಶಕ್ಕೆ ಪಡೆದು ಚಾಲಕನನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…