ಮುಲ್ಕಿ : ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ.
ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು ಸೀದಾ ಸರ್ವಿಸ್ ರಸ್ತೆಗೆ ನುಗ್ಗಿದೆ ಈ ವೇಳೆ ಬೈಕ್ ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ಮಗಳನ್ನು ಬಸ್ ಸ್ಟೆಂಡ್ ಗೆ ಬಿಡಲು ಬಂದಿದ್ದು ಲಾರಿ ಗುದ್ದಿದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿದ್ದು. ಮಗಳು ಸವಿತಾ ಗೆ ಸಣ್ಣ ಪುಟ್ಟ ಗಾಯ ಅಪಾಯದಿಂದ ಪಾರಾಗಿದ್ದಾರೆ.
ಅಲ್ಲದೆ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರತ್ತ ಲಾರಿ ನುಗ್ಗಿ ಬಂದಿದೆ. ಕೂದಲೆಳೆ ಅಂತರದಿಂದ ಕೂಲಿ ಕಾರ್ಮಿಕರು ಪಾರಾಗಿದ್ದು, ಕರ್ತವ್ಯದಲ್ಲಿದ್ದ ಮಹಿಳೆ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಲಾರಿ ವಶಕ್ಕೆ ಪಡೆದು ಚಾಲಕನನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …