ಬೆಂಗಳೂರು : ಆರನೇ ವೇತನ ಆಯೋಗ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ನಡೆಸುತ್ತಿದ್ದಾರೆ. ಸರ್ಕಾರ, ಅಧಿಕಾರಿಗಳು ಎಷ್ಟು ಮನವಿ ಮಾಡಿದರೂ ಮುಷ್ಕರದ ನಿರ್ಧಾರದಿಂದ ಹಿಂಜರಿಯದ ಸಾರಿಗೆ ನೌಕರರಿಗೆ ಸರ್ಕಾರ ಶಾಕ್ ನೀಡಲು ನಿರ್ಧರಿಸಿದೆ.
ಇಂದು ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು ಯಾವುದೇ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು ರಸ್ತೆಗೆ ಇಳಿದಿಲ್ಲ. ಈ ಹಿನ್ನೆಲೆ ಸರ್ಕಾರದ ಮನವಿಗೆ ಕಿವಿಗೊಡದ ನೌಕರರಿಗೆ ಶಾಕ್ ನೀಡಲು ಮುಂದಾಗಿರುವ ಸರ್ಕಾರ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವ ನೌಕರರ ಮಾರ್ಚ್ ತಿಂಗಳ ವೇತನ ತಡೆಯಲು ನಿರ್ಧರಿಸಿದೆ.
ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದ ಮುಕೇಶ್ ಅಂಬಾನಿ -Vishwanews24
ಈ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಅವರು ಮಾಹಿತಿ ನೀಡಿದ್ದಾರೆ. ”ಸಾರಿಗೆ ನೌಕರರು ಕೆಲಸಕ್ಕ ಹಾಜರಾಗದಿದ್ದರೆ ಮಾರ್ಚ್ ತಿಂಗಳ ಸಂಬಳ ಕಡಿತ ಮಾಡುತ್ತೇವೆ. ನೊ ವರ್ಕ್, ನೊ ಪೇ” ಎಂದು ಹೇಳಿದ್ದಾರೆ.
ಸಾರಿಗೆ ನಿಗಮವು ಪ್ರತಿ ತಿಂಗಳು 10ನೇ ತಾರೀಖಿನೊಳಗೆ ನೌಕರರಿಗೆ ವೇತನ ನೀಡುತ್ತಿದ್ದವು. ಈ ಬಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಸರ್ಕಾರ ವೇತನ ತಡೆಹಿಡಿಯಲು ನಿರ್ಧರಿಸಿದೆ. ಎಲ್ಲಿಯವರೆಗೂ ಸಾರಿಗೆ ನೌಕರರು ಮುಷ್ಕರ ಕೈಬಿಡುವುದಿಲ್ಲವೋ ಅಲ್ಲಿಯವರೆಗೂ ಸಂಬಳ ನೀಡಬಾರದು ಸಾರಿಗೆ ನಿಗಮಗಳಿಗೆ ಸರ್ಕಾರ ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಉಡುಪಿ: ಮುಷ್ಕರ ಹಿನ್ನೆಲೆ ರಸ್ತೆಗಿಳಿಯದ KSRTC ಬಸ್ಗಳು ; ಖಾಸಗಿ ಬಸ್ಗಳ ಮೊರೆ ಹೋದ ಪ್ರಯಾಣಿಕರು -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…