Featured

ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ ಸವದಿ ಮನವಿ -Vishwanews24

ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ..

ಸರ್ಕಾರ ಎಂದೆಂದಿಗೂ ತಮ್ಮ ಜೊತೆಗಿದೆ..

ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ ಸವದಿ ಮನವಿ -Vishwanews24

ಹುಮ್ನಾಬಾದ್: ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು ಸಹ ಕೇಳಿಕೊಂಡಿದ್ದೇವೆ, ಸದ್ಯದಲ್ಲಿಯೇ ವೇತನ ಹೆಚ್ಚಿಸಲಾಗುವುದು, ನೀವು ಮುಷ್ಕರ ನಡೆಸಿದರೆ ಇಲಾಖೆಗೆ ನಷ್ಟವಾಗಿ ವೇತನ ನೀಡಲು ಮತ್ತಷ್ಟು ಕಷ್ಟವಾಗುತ್ತದೆ, ಹಾಗಾಗಿ ಸರ್ಕಾರದೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿಕೊಂಡರು.

9 ಬೇಡಿಕೆಗಳಲ್ಲಿ 8 ಈಡೇರಿಸಿದ್ದೇವೆ, ಸಾರಿಗೆ ನೌಕರರಿಗೆ ಶೇ. 8 ರಷ್ಟು ಹೆಚ್ಚು ಸಂಬಳ ಕೊಡುತ್ತೇವೆ, ಮುಷ್ಕರ ಕೈಬಿಡಿ : ಸಿಎಂ BSY -Vishwanews24

ಸಾರಿಗೆ ಇಲಾಖೆ ನೌಕರರನ್ನು ಮುಷ್ಕರ ಮಾಡಿಸಲೇಬೇಕೆಂದು ಮಾಡಿಸುತ್ತಿದ್ದಾರೆ, ಇದರ ಹಿಂದೆ ಯಾರಿದ್ದಾರೆ ಎಂದು ಮುಂದೆ ಗೊತ್ತಾಗುತ್ತದೆ. ಯಾರದ್ದೋ ಮಾತು ಕೇಳಬೇಡಿ, ಇಂದು ಮುಷ್ಕರ ನಿಲ್ಲಿಸಿ ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗಿ ಎಂದು ನೌಕರರನ್ನು ಕೇಳಿಕೊಂಡರು.

ಸಾರಿಗೆ ಇಲಾಖೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗಬಾರದೆಂದು ಖಾಸಗಿ ಬಸ್ಸು ನಿರ್ವಾಹಕರಲ್ಲಿ ಓಡಾಡಕ್ಕೆ ಕೇಳಿಕೊಂಡಿದ್ದು, ಖಾಸಗಿ ಬಸ್ಸುಗಳನ್ನು ನಿಲ್ಲಿಸಲು ಜಾಗವನ್ನು ನೀಡಿ ವ್ಯವಸ್ಥೆ ಮಾಡಿದ್ದೇವೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಸರ್ಕಾರ ಸಾರಿಗೆ ನೌಕರರ ಆಶೋತ್ತರಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಸರ್ಕಾರ ಎಂದೆಂದಿಗೂ ತಮ್ಮ ಜೊತೆಗಿದ್ದು, ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸುತ್ತಿದ್ದೇನೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕಾಪು ಬಿಜೆಪಿ ಮಂಡಳ- ಬಿಜೆಪಿ ಯುವಮೋರ್ಚ ವತಿಯಿಂದ ಹುತಾತ್ಮ ಯೋಧರಿಗೆ ನುಡಿನಮನ ಕಾರ್ಯಕ್ರಮ -Vishwanews24

ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ , ನಮ್ಮದು ಒಂದೇ ಕುಟುಂಬ : ಕೆ.ಎಸ್.ಈಶ್ವರಪ್ಪ -Vishwanews24

Vishwa News 24

Recent Posts

ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…

8 minutes ago

ಇನ್ಮುಂದೆ ವೈದ್ಯರ ಶಿಫಾರಸು ಇಲ್ಲದೇ ಮೆಡಿಕಲ್‌ನಲ್ಲಿ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ : ಕೇಂದ್ರ ಆದೇಶ – vishwanews24

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…

18 minutes ago

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

29 minutes ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

20 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

20 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

20 hours ago