Featured

ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ ಸವದಿ ಮನವಿ -Vishwanews24

ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ..

ಸರ್ಕಾರ ಎಂದೆಂದಿಗೂ ತಮ್ಮ ಜೊತೆಗಿದೆ..

ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ ಸವದಿ ಮನವಿ -Vishwanews24

ಹುಮ್ನಾಬಾದ್: ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು ಸಹ ಕೇಳಿಕೊಂಡಿದ್ದೇವೆ, ಸದ್ಯದಲ್ಲಿಯೇ ವೇತನ ಹೆಚ್ಚಿಸಲಾಗುವುದು, ನೀವು ಮುಷ್ಕರ ನಡೆಸಿದರೆ ಇಲಾಖೆಗೆ ನಷ್ಟವಾಗಿ ವೇತನ ನೀಡಲು ಮತ್ತಷ್ಟು ಕಷ್ಟವಾಗುತ್ತದೆ, ಹಾಗಾಗಿ ಸರ್ಕಾರದೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿಕೊಂಡರು.

9 ಬೇಡಿಕೆಗಳಲ್ಲಿ 8 ಈಡೇರಿಸಿದ್ದೇವೆ, ಸಾರಿಗೆ ನೌಕರರಿಗೆ ಶೇ. 8 ರಷ್ಟು ಹೆಚ್ಚು ಸಂಬಳ ಕೊಡುತ್ತೇವೆ, ಮುಷ್ಕರ ಕೈಬಿಡಿ : ಸಿಎಂ BSY -Vishwanews24

ಸಾರಿಗೆ ಇಲಾಖೆ ನೌಕರರನ್ನು ಮುಷ್ಕರ ಮಾಡಿಸಲೇಬೇಕೆಂದು ಮಾಡಿಸುತ್ತಿದ್ದಾರೆ, ಇದರ ಹಿಂದೆ ಯಾರಿದ್ದಾರೆ ಎಂದು ಮುಂದೆ ಗೊತ್ತಾಗುತ್ತದೆ. ಯಾರದ್ದೋ ಮಾತು ಕೇಳಬೇಡಿ, ಇಂದು ಮುಷ್ಕರ ನಿಲ್ಲಿಸಿ ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗಿ ಎಂದು ನೌಕರರನ್ನು ಕೇಳಿಕೊಂಡರು.

ಸಾರಿಗೆ ಇಲಾಖೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗಬಾರದೆಂದು ಖಾಸಗಿ ಬಸ್ಸು ನಿರ್ವಾಹಕರಲ್ಲಿ ಓಡಾಡಕ್ಕೆ ಕೇಳಿಕೊಂಡಿದ್ದು, ಖಾಸಗಿ ಬಸ್ಸುಗಳನ್ನು ನಿಲ್ಲಿಸಲು ಜಾಗವನ್ನು ನೀಡಿ ವ್ಯವಸ್ಥೆ ಮಾಡಿದ್ದೇವೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಸರ್ಕಾರ ಸಾರಿಗೆ ನೌಕರರ ಆಶೋತ್ತರಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಸರ್ಕಾರ ಎಂದೆಂದಿಗೂ ತಮ್ಮ ಜೊತೆಗಿದ್ದು, ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸುತ್ತಿದ್ದೇನೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕಾಪು ಬಿಜೆಪಿ ಮಂಡಳ- ಬಿಜೆಪಿ ಯುವಮೋರ್ಚ ವತಿಯಿಂದ ಹುತಾತ್ಮ ಯೋಧರಿಗೆ ನುಡಿನಮನ ಕಾರ್ಯಕ್ರಮ -Vishwanews24

ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ , ನಮ್ಮದು ಒಂದೇ ಕುಟುಂಬ : ಕೆ.ಎಸ್.ಈಶ್ವರಪ್ಪ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

2 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

2 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

3 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

5 hours ago