Featured

ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ ಸವದಿ ಮನವಿ -Vishwanews24

ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ..

ಸರ್ಕಾರ ಎಂದೆಂದಿಗೂ ತಮ್ಮ ಜೊತೆಗಿದೆ..

ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ ಸವದಿ ಮನವಿ -Vishwanews24

ಹುಮ್ನಾಬಾದ್: ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು ಸಹ ಕೇಳಿಕೊಂಡಿದ್ದೇವೆ, ಸದ್ಯದಲ್ಲಿಯೇ ವೇತನ ಹೆಚ್ಚಿಸಲಾಗುವುದು, ನೀವು ಮುಷ್ಕರ ನಡೆಸಿದರೆ ಇಲಾಖೆಗೆ ನಷ್ಟವಾಗಿ ವೇತನ ನೀಡಲು ಮತ್ತಷ್ಟು ಕಷ್ಟವಾಗುತ್ತದೆ, ಹಾಗಾಗಿ ಸರ್ಕಾರದೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿಕೊಂಡರು.

9 ಬೇಡಿಕೆಗಳಲ್ಲಿ 8 ಈಡೇರಿಸಿದ್ದೇವೆ, ಸಾರಿಗೆ ನೌಕರರಿಗೆ ಶೇ. 8 ರಷ್ಟು ಹೆಚ್ಚು ಸಂಬಳ ಕೊಡುತ್ತೇವೆ, ಮುಷ್ಕರ ಕೈಬಿಡಿ : ಸಿಎಂ BSY -Vishwanews24

ಸಾರಿಗೆ ಇಲಾಖೆ ನೌಕರರನ್ನು ಮುಷ್ಕರ ಮಾಡಿಸಲೇಬೇಕೆಂದು ಮಾಡಿಸುತ್ತಿದ್ದಾರೆ, ಇದರ ಹಿಂದೆ ಯಾರಿದ್ದಾರೆ ಎಂದು ಮುಂದೆ ಗೊತ್ತಾಗುತ್ತದೆ. ಯಾರದ್ದೋ ಮಾತು ಕೇಳಬೇಡಿ, ಇಂದು ಮುಷ್ಕರ ನಿಲ್ಲಿಸಿ ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗಿ ಎಂದು ನೌಕರರನ್ನು ಕೇಳಿಕೊಂಡರು.

ಸಾರಿಗೆ ಇಲಾಖೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗಬಾರದೆಂದು ಖಾಸಗಿ ಬಸ್ಸು ನಿರ್ವಾಹಕರಲ್ಲಿ ಓಡಾಡಕ್ಕೆ ಕೇಳಿಕೊಂಡಿದ್ದು, ಖಾಸಗಿ ಬಸ್ಸುಗಳನ್ನು ನಿಲ್ಲಿಸಲು ಜಾಗವನ್ನು ನೀಡಿ ವ್ಯವಸ್ಥೆ ಮಾಡಿದ್ದೇವೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಸರ್ಕಾರ ಸಾರಿಗೆ ನೌಕರರ ಆಶೋತ್ತರಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಸರ್ಕಾರ ಎಂದೆಂದಿಗೂ ತಮ್ಮ ಜೊತೆಗಿದ್ದು, ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸುತ್ತಿದ್ದೇನೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕಾಪು ಬಿಜೆಪಿ ಮಂಡಳ- ಬಿಜೆಪಿ ಯುವಮೋರ್ಚ ವತಿಯಿಂದ ಹುತಾತ್ಮ ಯೋಧರಿಗೆ ನುಡಿನಮನ ಕಾರ್ಯಕ್ರಮ -Vishwanews24

ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ , ನಮ್ಮದು ಒಂದೇ ಕುಟುಂಬ : ಕೆ.ಎಸ್.ಈಶ್ವರಪ್ಪ -Vishwanews24

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

7 minutes ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

32 minutes ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

47 minutes ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

59 minutes ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

1 hour ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

1 hour ago