ಉಡುಪಿ: ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಉಡುಪಿಯಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತೀ ಯುಗದಲ್ಲೂ ರಾಕ್ಷಸರ ವಧೆಗೆ ದೇವರು ಅವತಾರವೆತ್ತಿದರು. ಕಲಿಯುಗದ ರಾಕ್ಷಸರು ಸಂಸತ್ ಮೇಲೆ ಕೋರ್ಟ್ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಮುಸಲ್ಮಾನರಿಗೆ ಪ್ರಗತಿಪರರು ಬೆಂಬಲ ನೀಡುತ್ತಿದ್ದಾರೆ. ರಾಮಮಂದಿರ ನಿರ್ಮಾಣ ಆದರೆ ಸಮಾಜ ಒಗ್ಗೂಡುತ್ತದೆ ಎಂಬ ಭಯ ಅವರಿಗೆ ಇದೆ. ಈವರೆಗೆ ದೇಶದಲ್ಲಿ 33 ಸಾವಿರ ಮಂದಿರ ನಾಶವಾಗಿದೆ ಎಂದು ಹೇಳಿದರು.
ರಾಮ ಮಂದಿರದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ನಮಗೆ ಬೇಕು. ಮಂದಿರ್ ಭೀ ಚಾಹಿಯೇ- ಮೋದೀ ಬೀ ಚಾಹಿಯೇ. ಅವರನ್ನು ಕೆಳಗಿಳಿಸುವ ದುಷ್ಟಶಕ್ತಿಗಳನ್ನು ಗಮನಿಸಿಕೊಳ್ಳಬೇಕು ಎಂದು ಮಂಜುನಾಥ್ ಸ್ವಾಮೀಜಿ ಜನಾಗ್ರಹ ಸಮಾವೇಶದಲ್ಲಿ ಕರೆ ನೀಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…