ಅಯೋಧ್ಯೆ,:ಶ್ರೀರಾಮ ಹುಟ್ಟಿದ ಆಯೋಧ್ಯೆಯಲ್ಲಿಯೇ ಮುಸಲ್ಮಾನ ಬಾಂಧವರಿಗಾಗಿ ಸೀತಾ ರಾಮ ದೇವಾಲಯದಲ್ಲಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಇಫ್ತಾರ್ ಕೂಟವನ್ನು ಏರ್ಪಡಿಸಲಾಗಿತ್ತು.
ರಂಜಾನ್ ತಿಂಗಳ ಉಪವಾಸ ಮುಸ್ಲಿಂ ಬಾಂಧವರಿಗೆ ಅತಿ ಪವಿತ್ರವಾದುದು. ಹಾಗೂ ಉಪವಾಸ ಹಿಡಿಯುವುದು ಕಡ್ಡಾಯವಾಗಿದೆ. ಅದು ಈ ಬೇಸಿಗೆಯ ಬಿಸಿ ತಾಪದಲ್ಲಿ ಮುಸಲ್ಮಾನ ಬಾಂಧವರಿಗೆ ಉಪವಾಸ ಹಿಡಿಯುವುದು ಅತೀ ಕಠಿಣವಾಗಿದೆ. ಒಂದು ತುತ್ತು ಅನ್ನಕ್ಕೂ ಗತಿ ಇಲ್ಲದೆ ಹಸಿದವನ ನೋವು ಸಾಮಾನ್ಯ ಮನುಷ್ಯನು ತಿಳಿಯಬೇಕು ಎನ್ನುವ ಉದ್ದೇಶದಿಂದ ರಮ್ ಝಾನ್ ಉಪವಾಸವನ್ನು ಆಚರಿಸಲಾಗುತ್ತದೆ.
ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ಜತೆ ಮಾತನಾಡಿರುವ ದೇಗುಲದ ಅರ್ಚಕ, ಇಫ್ತಾರ್ ಕೂಟದ ಆಯೋಜಕ ಯುಗಲ್ ಕಿಶೋರ್, ‘ದೇಗುಲದ ಆವರಣದಲ್ಲಿ ಆಯೋಜಿಸುತ್ತಿರುವ ಮೂರನೇ ಇಫ್ತಾರ್ ಕೂಟವಿದು. ಭವಿಷ್ಯದಲ್ಲೂ ನಾವು ಹೀಗೆಯೇ ನಡೆದುಕೊಳ್ಳುತ್ತೇವೆ. ನವೋತ್ಸಾಹದಿಂದ ಎಲ್ಲ ಧರ್ಮದ ಹಬ್ಬಗಳನ್ನೂ ನಾವು ಆಚರಿಸಬೇಕು,’ ಎಂದು ಅವರು ಅಭಿಪ್ರಾಯಪಟ್ಟರು.
ಶ್ರೀರಾಮ ಹುಟ್ಟಿದ ನೆಲದಲ್ಲಿ ಅಂದರೆ ಅಯೋಧ್ಯಾದಲ್ಲಿ ಮುಸಲ್ಮಾನ ಬಾಂಧವರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸಲಾಗಿತ್ತು. ಸೀತಾ ರಾಮ ದೇವಾಲಯದಲ್ಲಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಮುಸ್ಲಿಂ ಸಮುದಾಯಕ್ಕೆ ಸಂಘಟಿತ ರೋಜಾ ಇಫ್ತಾರ್ ಆಯೋಜಿಸಲಾಗಿತ್ತು. ಈ ರೋಜಾ ಇಫ್ತಾರ್ನಲ್ಲಿ ಮುಸ್ಲಿಂ ಸಮುದಾಯದ ಜನರನ್ನು ಹೊರತುಪಡಿಸಿ, ನಗರದ ಕೆಲವು ಸಾಧು-ಸಂತರು ಕೂಡ ಭಾಗಿಯಾಗಿದ್ದರು.
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದ ಮುಜಾಮಿಲ್ ಫೈಜಲ್ ನಾವು ನವರಾತ್ರಿಯನ್ನು ಹಿಂದೂ ಬಾಂಧವರೊಂದಿಗೆ ಪ್ರತಿ ವರ್ಷ ಆಚರಿಸುತ್ತೇವೆ ಎಂದು ಅವರು ಹೇಳಿದರು.ಧರ್ಮದ ಅಂಕೆಗಳಿಲ್ಲದೆ ಎಲ್ಲರೂ ನಮ್ಮ ಜತೆಗೆ ಸೇರಬಹುದು ಎಂದೂ ಫೈಜಲ್ ಮನವಿ ಮಾಡಿಕೊಂಡಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…