Featured

ಮುಸಲ್ಮಾನ ಬಾಂಧವರಿಗಾಗಿ ಆಯೋಧ್ಯೆಯ ಸೀತಾ ರಾಮ ದೇವಾಲಯದಲ್ಲಿ ಇಫ್ತಾರ್ ಕೂಟ -Vishwanews24

ಅಯೋಧ್ಯೆ,:ಶ್ರೀರಾಮ ಹುಟ್ಟಿದ ಆಯೋಧ್ಯೆಯಲ್ಲಿಯೇ ಮುಸಲ್ಮಾನ ಬಾಂಧವರಿಗಾಗಿ ಸೀತಾ ರಾಮ ದೇವಾಲಯದಲ್ಲಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಇಫ್ತಾರ್ ಕೂಟವನ್ನು ಏರ್ಪಡಿಸಲಾಗಿತ್ತು.

ರಂಜಾನ್ ತಿಂಗಳ ಉಪವಾಸ ಮುಸ್ಲಿಂ ಬಾಂಧವರಿಗೆ ಅತಿ ಪವಿತ್ರವಾದುದು. ಹಾಗೂ ಉಪವಾಸ ಹಿಡಿಯುವುದು ಕಡ್ಡಾಯವಾಗಿದೆ. ಅದು ಈ ಬೇಸಿಗೆಯ ಬಿಸಿ ತಾಪದಲ್ಲಿ ಮುಸಲ್ಮಾನ ಬಾಂಧವರಿಗೆ ಉಪವಾಸ ಹಿಡಿಯುವುದು ಅತೀ ಕಠಿಣವಾಗಿದೆ. ಒಂದು ತುತ್ತು ಅನ್ನಕ್ಕೂ ಗತಿ ಇಲ್ಲದೆ ಹಸಿದವನ ನೋವು ಸಾಮಾನ್ಯ ಮನುಷ್ಯನು ತಿಳಿಯಬೇಕು ಎನ್ನುವ ಉದ್ದೇಶದಿಂದ ರಮ್ ಝಾನ್ ಉಪವಾಸವನ್ನು ಆಚರಿಸಲಾಗುತ್ತದೆ.

ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ಜತೆ ಮಾತನಾಡಿರುವ ದೇಗುಲದ ಅರ್ಚಕ, ಇಫ್ತಾರ್‌ ಕೂಟದ ಆಯೋಜಕ ಯುಗಲ್‌ ಕಿಶೋರ್‌, ‘ದೇಗುಲದ ಆವರಣದಲ್ಲಿ ಆಯೋಜಿಸುತ್ತಿರುವ ಮೂರನೇ ಇಫ್ತಾರ್‌ ಕೂಟವಿದು. ಭವಿಷ್ಯದಲ್ಲೂ ನಾವು ಹೀಗೆಯೇ ನಡೆದುಕೊಳ್ಳುತ್ತೇವೆ. ನವೋತ್ಸಾಹದಿಂದ ಎಲ್ಲ ಧರ್ಮದ ಹಬ್ಬಗಳನ್ನೂ ನಾವು ಆಚರಿಸಬೇಕು,’ ಎಂದು ಅವರು ಅಭಿಪ್ರಾಯಪಟ್ಟರು.

ಶ್ರೀರಾಮ ಹುಟ್ಟಿದ ನೆಲದಲ್ಲಿ ಅಂದರೆ ಅಯೋಧ್ಯಾದಲ್ಲಿ ಮುಸಲ್ಮಾನ ಬಾಂಧವರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸಲಾಗಿತ್ತು. ಸೀತಾ ರಾಮ ದೇವಾಲಯದಲ್ಲಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಮುಸ್ಲಿಂ ಸಮುದಾಯಕ್ಕೆ ಸಂಘಟಿತ ರೋಜಾ ಇಫ್ತಾರ್ ಆಯೋಜಿಸಲಾಗಿತ್ತು. ಈ ರೋಜಾ ಇಫ್ತಾರ್ನಲ್ಲಿ ಮುಸ್ಲಿಂ ಸಮುದಾಯದ ಜನರನ್ನು ಹೊರತುಪಡಿಸಿ, ನಗರದ ಕೆಲವು ಸಾಧು-ಸಂತರು ಕೂಡ ಭಾಗಿಯಾಗಿದ್ದರು.

ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದ ಮುಜಾಮಿಲ್‌ ಫೈಜಲ್‌ ನಾವು ನವರಾತ್ರಿಯನ್ನು ಹಿಂದೂ ಬಾಂಧವರೊಂದಿಗೆ ಪ್ರತಿ ವರ್ಷ ಆಚರಿಸುತ್ತೇವೆ ಎಂದು ಅವರು ಹೇಳಿದರು.ಧರ್ಮದ ಅಂಕೆಗಳಿಲ್ಲದೆ ಎಲ್ಲರೂ ನಮ್ಮ ಜತೆಗೆ ಸೇರಬಹುದು ಎಂದೂ ಫೈಜಲ್‌ ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

22 minutes ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

21 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

21 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

23 hours ago