Featured

ಮುಸ್ಲಿಂ ಕಿಡಿಗೇಡಿಗಳಿಗೆ ಎಚ್ಚರಿಕೆ ಕೊಡೋದಕ್ಕೂ ಸಹ ಈ ಸರ್ಕಾರ ಬಿಡ್ತಾ ಇಲ್ಲ : ಪ್ರಮೋದ್ ಮುತಾಲಿಕ್ ಆಕ್ರೋಶ – Vishwanews24

ಮುಸ್ಲಿಂ ಕಿಡಿಗೇಡಿಗಳಿಗೆ ಎಚ್ಚರಿಕೆ ಕೊಡೋದಕ್ಕೂ ಸಹ ಈ ಸರ್ಕಾರ ಬಿಡ್ತಾ ಇಲ್ಲ : ಪ್ರಮೋದ್ ಮುತಾಲಿಕ್ ಆಕ್ರೋಶ – Vishwanews24

ಕೋಲಾರ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.

ತಾನು ಬಂಧನಕ್ಕೊಳಗಾಗುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ನವೆಂಬರ್ 13 ರಂದು ನಡೆದ ದತ್ತ ಮಾಲಾಧಾರಿಗಳ ಬಸ್ ಮೇಲೆ ದಾಳಿ ಘಟನೆ ಅತ್ಯಂತ ಕ್ರೂರಿಯಾಗಿದೆ. ಐದು ನಿಮಿಷಯದಲ್ಲಿ ಪೊಲೀಸರು ಬರದೇ ಇದ್ದಿದ್ದರೆ ಬಸ್ ಅನ್ನು ಸುಟ್ಟು ಹಾಕುತ್ತಿದ್ದರು. 47 ಜನ ಹಿಂದೂ ಕಾರ್ಯಕರ್ತರು ಅಸು ನೀಗ್ತಾ ಇದ್ದರು. ಅದಕ್ಕಾಗಿ ಪೋಲೀಸ್ ಇಲಾಖೆ ಧನ್ಯವಾದ ಹೇಳುತ್ತೇನೆ. ಆದರೆ ಇವತ್ತು ತೆಗೆದುಕೊಂಡಿರುವ ಸರ್ಕಾರದ ಕ್ರಮ ಸರಿಯಲ್ಲ. ಹಿಂದೂ ಸಮಾಜದ ಮೇಲೆ ದೌರ್ಜನ್ಯ ನಡೆದಿದೆ. ಈ ಕುರಿತು ಪ್ರತಿಭಟನೆ ಸಹ ಮಾಡಬಾರದಾ ಎಂದು ಪ್ರಮೋದ್ ಮುತಾಲಿಕ್ ಪ್ರಶ್ನಿಸಿದರು.

47 ಜನ ಹಿಂದೂ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಯಿಂದ ನನಗೆ ತೀವ್ರ ನೋವು ಉಂಟಾಗಿದೆ ಎಂದ ಪ್ರಮೋದ್ ಮುತಾಲಿಕ್, ಮುಸ್ಲಿಂ ಕಿಡಿಗೇಡಿಗಳಿಗೆ ಎಚ್ಚರಿಕೆ ಕೊಡೋದಕ್ಕೂ ಸಹ ಈ ಸರ್ಕಾರ ಬಿಡ್ತಾ ಇಲ್ಲ. ಸರ್ಕಾರ ನಮ್ಮನ್ನ ತಡೆಯುತ್ತ ಇರೋದು ಸರಿಯಲ್ಲ ಎಂದು ರಾಜ್ಯ ತನ್ನ ಬಂಧನಕ್ಕೂ ಮುನ್ನ ಕೋಲಾರದ ರಾಮಸಂದ್ರ ಗಡಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದರು.

ದತ್ತ ಮಾಲಾಧಾರಿಗಳ ಬಸ್ ಮೇಲೆ ನಡೆದ ದಾಳಿ ಖಂಡಿಸಿ ಕೋಲಾರದಲ್ಲಿ ಹಿಂದೂಪರ ಸಂಘಟನೆಗಳಿಂದ ಬಂದ್‌ಗೆ ಕರೆನೀಡಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೋಲಾರ ಪ್ರವೇಶವನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ನಿನ್ನೆಯೇ ನಿಷೇಧ ಮಾಡಿದ್ದರು. ಆದರೂ ಪ್ರಮೋದ್ ಮುತಾಲಿಕ್‌ ಕೋಲಾರ ಕಡೆಗೆ ಆಗಮಿಸುತ್ತಿದ್ದ ಸುದ್ದಿ ಪೊಲೀಸರಿಗೆ ಇಂದು ತಿಳಿದಿತ್ತು. ಈ ಹಿನ್ನೆಲೆ ಕೋಲಾರ ಬಾರ್ಡರ್ ಬಳಿ ಪೊಲೀಸರ ನಿಯೋಜನೆ ಮಾಡಿ ತಿಳುವಳಿಕೆ ನೋಟಿಸ್ ನೀಡಿ ವಾಪಸು ಕಳುಹಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿತ್ತು. ಆದರೆ ಪ್ರಮೋದ್ ಮುತಾಲಿಕ್ ಗಡಿ ಪ್ರವೇಶಿಸಿ ಮುಂದೆ ಬರುತ್ತಿದ್ದಂತೆ ನಂದಗುಡಿ ಪೊಲೀಸರು ಮುತಾಲಿಕ್‌ರನ್ನು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

10 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago