ಉಡುಪಿ: ಮತದಾರರಿಗೆ ಬಿಜೆಪಿ ಭ್ರಮನಿರಸನ ಮಾಡಿದೆ. ಬಿಜೆಪಿಗೆ ಪರ್ಯಾಯ ಕಾಂಗ್ರೆಸ್ ಪಕ್ಷ ಮಾತ್ರ ಎಂಬ ಭಾವನೆ ಮೂಡುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಬೇಕು. ಇದಕ್ಕೆ ಕಾರ್ಯಕರ್ತರ ಬಲ ಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ನಗರದ ಪುರಭವನದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕರಾವಳಿಯಲ್ಲಿ ಕಾಂಗ್ರೆಸ್ ಬಲ ಕುಂದಿರುವುದು ಸತ್ಯ. ಹಿಂದೆ ಉಳ್ಳಾಲದಿಂದ ಉಡುಪಿವರೆಗೆ ಮಾಡಿದ್ದ ಸದ್ಭಾವನಾ ಯಾತ್ರೆಯನ್ನು ಮತ್ತೊಮ್ಮೆ ಮಾಡಿ ಪಕ್ಷವನ್ನು ಬಲಪಡಿಸೋಣ ಎಂದರು.
ಬಿಜೆಪಿ ಸುಳ್ಳಿನ ಪಕ್ಷ. ಜನರ ತಲೆಗೆ ಸುಳ್ಳುಗಳನ್ನು ತುಂಬಿ ಅಧಿಕಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಮುಸ್ಲಿಮರ ಪರ, ಹಿಂದೂ ವಿರೋಧಿಗಳು ಎಂದು ಬಿಂಬಿಸಿದ್ದಾರೆ. ನಾವು ಬಿಜೆಪಿಗರಂತೆ ಡೋಂಗಿ ಹಿಂದುಗಳಲ್ಲ, ಅಪ್ಪಟ ಹಿಂದೂಗಳು. ಮುಸ್ಲಿಂ, ಕ್ರಿಶ್ಚಿಯನ್, ಹಿಂದೂಗಳನ್ನು ಒಟ್ಟಾಗಿ ಕರೆದೊಯ್ಯುವ ಪಕ್ಷ ಕಾಂಗ್ರೆಸ್ ಎಂದರು.
6 ವರ್ಷಗಳ ಅಧಿಕಾರಾವಧಿಯಲ್ಲಿ ಹೆಸರಿಸಬಹುದಾದ ಯಾವ ಉತ್ತಮ ಕೆಲಸವನ್ನೂ ಬಿಜೆಪಿ ಮಾಡಿಲ್ಲ. ನೋಟು ಅಮಾನ್ಯ, ಜಿಎಸ್ಟಿ ಹೆಸರಿನಲ್ಲಿ ಬಡವರಿಗೆ ತೊಂದರೆ ನೀಡಿದ್ದು ಅವರ ಸಾಧನೆ ಎಂದು ವ್ಯಂಗ್ಯವಾಡಿದರು.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರ್ನಾಥ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ವಿಶುನಾಥನ್, ನಾರಾಯಣಸ್ವಾಮಿ, ಗೋಪಾಲ ಪೂಜಾರಿ, ಐವನ್ ಡಿಸೋಜಾ, ಯು.ಆರ್.ಸಭಾಪತಿ, ಜಿ.ಎ.ಭಾವಾ, ಎಂ.ಎ.ಗಫೂರ್, ರಂಗಸ್ವಾಮಿ, ರೋಷನಿ ಒಲಿವೆರಾ ಇದ್ದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…