Featured

ಮುಸ್ಲಿಂ ಧರ್ಮದಲ್ಲಿ ಮದುವೆ ಎನ್ನುವುದು ಕೇವಲ ಒಪ್ಪಂದ, ಅದು ಸಂಸ್ಕಾರವಲ್ಲ : ಕರ್ನಾಟಕ ಹೈಕೋರ್ಟ್ – Vishwanews24

ಮುಸ್ಲಿಂ ಧರ್ಮದಲ್ಲಿ ಮದುವೆ ಎನ್ನುವುದು ಕೇವಲ ಒಪ್ಪಂದ, ಅದು ಸಂಸ್ಕಾರವಲ್ಲ : ಕರ್ನಾಟಕ ಹೈಕೋರ್ಟ್ – Vishwanews24

ಬೆಂಗಳೂರು: ಮುಸ್ಲಿಂ ಧರ್ಮದಲ್ಲಿ ಮದುವೆ ಎನ್ನುವುದು ಕೇವಲ ಒಪ್ಪಂದ, ಅದು ಸಂಸ್ಕಾರವಲ್ಲ ನಿಜ. ಹಾಗೆಂದ ಮಾತ್ರಕ್ಕೆ ಮೊದಲ ಪತ್ನಿಗೆ ವಿಚ್ಛೇದನ ನೀಡಿದಾಗ ಆಕೆಯನ್ನು ಜೀವನಾಂಶದಿಂದ ಹೊರಕ್ಕೆ ಹಾಕುವಂತಿಲ್ಲ. ಆ ಹೊಣೆಗಾರಿಕೆಯಿಂದ ವಿಚ್ಛೇದಿತ ಪತಿ ತಪ್ಪಿಸಿಕೊಳ್ಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಜತೆಗೆ, ಜೀವನಾಂಶ ಕೊಡದೇ ಪತ್ನಿಯನ್ನು ಸತಾಯಿಸುತ್ತಿದ್ದ ವ್ಯಕ್ತಿಗೆ 25 ಸಾವಿರ ರೂಪಾಯಿ ದಂಡವನ್ನೂ ವಿಧಿಸಿದೆ.

ಬೆಂಗಳೂರಿನ ಎಜಾಜುರ್‌ ರೆಹಮಾನ್‌ ಎಂಬ ವ್ಯಕ್ತಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಕೋರ್ಟ್‌ ಈ ತೀರ್ಪು ನೀಡಿದೆ. ಪತ್ನಿಗೆ ವಿಚ್ಛೇದನ ನೀಡಿ ಎರಡನೆಯ ವಿವಾಹವಾಗಿದ್ದಾರೆ ಎಜಾಜುರ್‌. ಇವರು ತಮ್ಮ ಮೊದಲ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಬೇಕು ಎಂದು ಕೌಟುಂಬಿಕ ಕೋರ್ಟ್‌ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಇದರಿಂದ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದು ದಂಡ ವಿಧಿಸಿದ್ದಾರೆ.

ಇವರು 1991 ರಲ್ಲಿ ಸಾಯಿರಾ ಬಾನು ಎಂಬುವವನ್ನು ಮದುವೆಯಾಗಿದ್ದರು. ಎಂಟೂವರೆ ತಿಂಗಳ ಬಳಿಕ ತಲಾಖ್‌ ನೀಡಿ 5 ಸಾವಿರ ರೂ. ಮೆಹರ್‌ ನೀಡಿದ್ದರು. 2002 ರಲ್ಲಿ ಸಾಯಿರಾ ಬಾನು ಜೀವನಾಂಶ ಕೋರಿ ಕೋರ್ಟ್‌ ಮೊರೆ ಹೋಗಿದ್ದರು. ತಿಂಗಳಿಗೆ ಮೂರು ಸಾವಿರದಂತೆ ಜೀವನಾಂಶ ನೀಡುವಂತೆ ಕೋರ್ಟ್‌ ಆದೇಶಿಸಿತ್ತು. ಇದನ್ನು ಇವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

‘ಮುಸ್ಲಿಂ ಕಾನೂನಿನ ಪ್ರಕಾರ ಇಸ್ಲಾಂ ಧರ್ಮದಲ್ಲಿ ವಿವಾಹ ಒಂದು ಸಂಸ್ಕಾರವಲ್ಲ, ಇದು ಒಪ್ಪಂದ. ಗಂಡು ಮತ್ತು ಹೆಣ್ಣಿನ ಕುಟುಂಬಗಳ ನಡುವಿನ ಒಪ್ಪಂದದಂತೆ ವಿವಾಹ ನಡೆಯುತ್ತದೆ. ಹಾಗೆಂದು ದಂಪತಿ ಡಿವೋರ್ಸ್‌ ಕೊಟ್ಟಾಗ ವಿಚ್ಛೇದಿತ ಗಂಡ ತನ್ನ ಕರ್ತವ್ಯದಿಂದ ಮುಕ್ತನಾಗುವುದಿಲ್ಲ. ಎರಡನೇ ಪತ್ನಿ ಹಾಗೂ ಆಕೆಯಿಂದ ಹುಟ್ಟಿದ ಮಕ್ಕಳ ನಿರ್ವಹಣೆ ಮಾಡಬೇಕಿರುವ ಹಿನ್ನಲೆಯಲ್ಲಿ ವಿಚ್ಛೇದನ ನೀಡಿದ ಮೊದಲ ಪತ್ನಿಗೆ ಜೀವನಾಂಶ ನೀಡುವ ಹೊಣೆಗಾರಿಕೆಯಿಂದ ಪತಿ ತಪ್ಪಿಸಿಕೊಳ್ಳುವಂತಿಲ್ಲ. ‘ಮೆಹರ್‌’ ನೀಡಿದಾಕ್ಷಣ ಒಪ್ಪಂದ ಮುಕ್ತಾಯವಾಗುವುದಿಲ್ಲ. ವಿಚ್ಛೇದಿತ ಪತ್ನಿ ಎರಡನೇ ಮದುವೆ ಆಗದಿದ್ದಾಗ ಮತ್ತು ಜೀವನ ನಿರ್ವಹಣೆಗೆ ಅಶಕ್ತಳಾಗಿದ್ದಾಗ “ಇದ್ದತ್‌’ (ತಲಾಕ್‌ ನೀಡಿದ ಬಳಿಕದ ನಾಲ್ಕು ತಿಂಗಳು) ಅವಧಿಯ ಅನಂತರವೂ ಆಕೆ ಜೀವನಾಂಶ ಪಡೆಯುವ ಹಕ್ಕು ಹೊಂದಿದ್ದಾಳೆ ಎಂದು ಹೈಕೋರ್ಟ್‌ ಹೇಳಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

3 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

3 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

5 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

5 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

5 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

6 hours ago