ಉಡುಪಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಹೊಸದಿಲ್ಲಿ:  ಅರಬ್‌ ದೇಶಗಳಲ್ಲಿನ ಮುಸ್ಲಿಮ್‌ ಬ್ರದರ್‌ಹುಡ್‌ನ‌ ಸಿದ್ಧಾಂತವನ್ನೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌)ವೂ ಹೊಂದಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬರ್ಲಿನ್‌ನಲ್ಲಿ ಹೇಳಿರುವುದು ಇದೀಗ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಈಜಿಪ್ಟ್ನಲ್ಲಿ ಹುಟ್ಟಿಕೊಂಡ ಮುಸ್ಲಿಂ ಬ್ರದರ್‌ಹುಡ್‌ ಎಂಬ ಸುನ್ನಿ ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಪರಿಗಣಿಸಲಾಗಿದ್ದು, ಈಗಾಗಲೇ ರಷ್ಯಾ ಸೇರಿದಂತೆ ಆರಕ್ಕೂ ಹೆಚ್ಚು ದೇಶಗಳಲ್ಲಿ ನಿಷೇಧಗೊಂಡಿದೆ. ಜರ್ಮನಿಯಲ್ಲಿ ಗುರುವಾರ ಮಾತನಾಡಿದ್ದ ರಾಹುಲ್‌, ಅಭಿವೃದ್ಧಿಯಿಂದ ಹಿಂದುಳಿದ ಜನರನ್ನು ಹೊರಗಿಟ್ಟಿದ್ದರಿಂದ ಅವರು ಐಸಿಸ್‌ನಂತಹ ಬಂಡುಕೋರರ ಸಂಘಟನೆ ಸೇರುತ್ತಾರೆ ಎಂದಿದ್ದರು.

ಬರ್ಲಿನ್‌ನಲ್ಲಿ ನಡೆದ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಆಯೋಜಿಸಿದ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ರಾಹುಲ್‌, ದೇಶವನ್ನು ಕಾಂಗ್ರೆಸ್‌ ಒಗ್ಗೂಡಿಸಿದರೆ, ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ ಎಂದಿದ್ದಾರೆ. ಸುದೀರ್ಘ‌ ಭಾಷಣಗಳಲ್ಲಿ ದ್ವೇಷಯುತ ಹೇಳಿಕೆಗಳನ್ನು ನೀಡಲಾಗುತ್ತಿದ್ದರೆ, ರೈತರು ಇನ್ನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಹಾಗೂ ಯುವಕರಿಗೆ ದೇಶದಲ್ಲಿ ಯಾವುದೇ ಭವಿಷ್ಯವೇ ಕಾಣಿಸುತ್ತಿಲ್ಲ ಎಂದೂ ರಾಹುಲ್‌ ಟೀಕಿಸಿದ್ದಾರೆ. ಚೀನಾ 24 ಗಂಟೆಗಳಲ್ಲಿ 50 ಸಾವಿರ ಜನರಿಗೆ ಉದ್ಯೋಗ ನೀಡಿದರೆ, ಈ ಅವಧಿಯಲ್ಲಿ ಭಾರತ ಕೇವಲ 450 ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನೊಂದೆಡೆ 2019ರಲ್ಲಿ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ ಎಂದು ರಾಹುಲ್‌ ಹೇಳಿದ್ದಾರೆ. ಪ್ರಧಾನಿ ಮೋದಿ ಬಿಜೆಪಿ ಆಡಳಿತದ ರಾಜ್ಯಗಳಿಗೆ ಬೆಂಬಲ ನೀಡಿ, ಬಿಜೆಪಿಯೇತರ ರಾಜ್ಯಗಳ ಅಭಿವೃದ್ಧಿಯನ್ನು ಕುಂಠಿತಗೊಳಿಸಲು ಬಯಸುತ್ತಿದ್ದಾರೆ. ಪಾಕಿಸ್ತಾನ ಕುರಿತಂತೆ ಮೋದಿ ಯಾವುದೇ ಸ್ಪಷ್ಟ ನೀತಿಯನ್ನು ಹೊಂದಿಲ್ಲ ಎಂದೂ ಆರೋಪಿಸಿರುವ ರಾಹುಲ್‌, ಡೋಕ್ಲಾಂನಲ್ಲಿ ಚೀನೀ ಸೇನೆ ಇನ್ನೂ ಇದ್ದು, ಪ್ರಧಾನಿ ಮೋದಿ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದೂ ದೂರಿದ್ದಾರೆ.

ಪಾಕಿಸ್ತಾನ ಉಗ್ರರ ದಾಳಿ ನಿಲ್ಲಿಸುವವರೆಗೂ ಮಾತುಕತೆ ಅಸಾಧ್ಯ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ. ಅದರ ಅರಿವಿಲ್ಲದೆ, ರಾಹುಲ್‌ ಶಾಂತಿ ಮಾತುಕತೆ ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.

 

 

 

 

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

20 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

2 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago