ಉಡುಪಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಹೊಸದಿಲ್ಲಿ:  ಅರಬ್‌ ದೇಶಗಳಲ್ಲಿನ ಮುಸ್ಲಿಮ್‌ ಬ್ರದರ್‌ಹುಡ್‌ನ‌ ಸಿದ್ಧಾಂತವನ್ನೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌)ವೂ ಹೊಂದಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬರ್ಲಿನ್‌ನಲ್ಲಿ ಹೇಳಿರುವುದು ಇದೀಗ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಈಜಿಪ್ಟ್ನಲ್ಲಿ ಹುಟ್ಟಿಕೊಂಡ ಮುಸ್ಲಿಂ ಬ್ರದರ್‌ಹುಡ್‌ ಎಂಬ ಸುನ್ನಿ ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಪರಿಗಣಿಸಲಾಗಿದ್ದು, ಈಗಾಗಲೇ ರಷ್ಯಾ ಸೇರಿದಂತೆ ಆರಕ್ಕೂ ಹೆಚ್ಚು ದೇಶಗಳಲ್ಲಿ ನಿಷೇಧಗೊಂಡಿದೆ. ಜರ್ಮನಿಯಲ್ಲಿ ಗುರುವಾರ ಮಾತನಾಡಿದ್ದ ರಾಹುಲ್‌, ಅಭಿವೃದ್ಧಿಯಿಂದ ಹಿಂದುಳಿದ ಜನರನ್ನು ಹೊರಗಿಟ್ಟಿದ್ದರಿಂದ ಅವರು ಐಸಿಸ್‌ನಂತಹ ಬಂಡುಕೋರರ ಸಂಘಟನೆ ಸೇರುತ್ತಾರೆ ಎಂದಿದ್ದರು.

ಬರ್ಲಿನ್‌ನಲ್ಲಿ ನಡೆದ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಆಯೋಜಿಸಿದ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ರಾಹುಲ್‌, ದೇಶವನ್ನು ಕಾಂಗ್ರೆಸ್‌ ಒಗ್ಗೂಡಿಸಿದರೆ, ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ ಎಂದಿದ್ದಾರೆ. ಸುದೀರ್ಘ‌ ಭಾಷಣಗಳಲ್ಲಿ ದ್ವೇಷಯುತ ಹೇಳಿಕೆಗಳನ್ನು ನೀಡಲಾಗುತ್ತಿದ್ದರೆ, ರೈತರು ಇನ್ನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಹಾಗೂ ಯುವಕರಿಗೆ ದೇಶದಲ್ಲಿ ಯಾವುದೇ ಭವಿಷ್ಯವೇ ಕಾಣಿಸುತ್ತಿಲ್ಲ ಎಂದೂ ರಾಹುಲ್‌ ಟೀಕಿಸಿದ್ದಾರೆ. ಚೀನಾ 24 ಗಂಟೆಗಳಲ್ಲಿ 50 ಸಾವಿರ ಜನರಿಗೆ ಉದ್ಯೋಗ ನೀಡಿದರೆ, ಈ ಅವಧಿಯಲ್ಲಿ ಭಾರತ ಕೇವಲ 450 ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನೊಂದೆಡೆ 2019ರಲ್ಲಿ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ ಎಂದು ರಾಹುಲ್‌ ಹೇಳಿದ್ದಾರೆ. ಪ್ರಧಾನಿ ಮೋದಿ ಬಿಜೆಪಿ ಆಡಳಿತದ ರಾಜ್ಯಗಳಿಗೆ ಬೆಂಬಲ ನೀಡಿ, ಬಿಜೆಪಿಯೇತರ ರಾಜ್ಯಗಳ ಅಭಿವೃದ್ಧಿಯನ್ನು ಕುಂಠಿತಗೊಳಿಸಲು ಬಯಸುತ್ತಿದ್ದಾರೆ. ಪಾಕಿಸ್ತಾನ ಕುರಿತಂತೆ ಮೋದಿ ಯಾವುದೇ ಸ್ಪಷ್ಟ ನೀತಿಯನ್ನು ಹೊಂದಿಲ್ಲ ಎಂದೂ ಆರೋಪಿಸಿರುವ ರಾಹುಲ್‌, ಡೋಕ್ಲಾಂನಲ್ಲಿ ಚೀನೀ ಸೇನೆ ಇನ್ನೂ ಇದ್ದು, ಪ್ರಧಾನಿ ಮೋದಿ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದೂ ದೂರಿದ್ದಾರೆ.

ಪಾಕಿಸ್ತಾನ ಉಗ್ರರ ದಾಳಿ ನಿಲ್ಲಿಸುವವರೆಗೂ ಮಾತುಕತೆ ಅಸಾಧ್ಯ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ. ಅದರ ಅರಿವಿಲ್ಲದೆ, ರಾಹುಲ್‌ ಶಾಂತಿ ಮಾತುಕತೆ ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.

 

 

 

 

Vishwa News 24

Recent Posts

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…

7 minutes ago

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…

17 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಜಿಲ್ಲಾಡಳಿತದ ಕ್ರಮಕ್ಕೆ ಕಾಪು ಬಿಜೆಪಿ ತೀವ್ರ ಖಂಡನೆ – vishwanews24

ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…

33 minutes ago

ಶಿರ್ವ ಡೇವಿಡ್‌ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ – vishwanews24

ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್‌ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ ..  ಪೊಲೀಸರಿಂದ ಆರೋಪಿಗಳ…

46 minutes ago

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…

58 minutes ago

ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…

1 hour ago