ಉಡುಪಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಹೊಸದಿಲ್ಲಿ:  ಅರಬ್‌ ದೇಶಗಳಲ್ಲಿನ ಮುಸ್ಲಿಮ್‌ ಬ್ರದರ್‌ಹುಡ್‌ನ‌ ಸಿದ್ಧಾಂತವನ್ನೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌)ವೂ ಹೊಂದಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬರ್ಲಿನ್‌ನಲ್ಲಿ ಹೇಳಿರುವುದು ಇದೀಗ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಈಜಿಪ್ಟ್ನಲ್ಲಿ ಹುಟ್ಟಿಕೊಂಡ ಮುಸ್ಲಿಂ ಬ್ರದರ್‌ಹುಡ್‌ ಎಂಬ ಸುನ್ನಿ ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಪರಿಗಣಿಸಲಾಗಿದ್ದು, ಈಗಾಗಲೇ ರಷ್ಯಾ ಸೇರಿದಂತೆ ಆರಕ್ಕೂ ಹೆಚ್ಚು ದೇಶಗಳಲ್ಲಿ ನಿಷೇಧಗೊಂಡಿದೆ. ಜರ್ಮನಿಯಲ್ಲಿ ಗುರುವಾರ ಮಾತನಾಡಿದ್ದ ರಾಹುಲ್‌, ಅಭಿವೃದ್ಧಿಯಿಂದ ಹಿಂದುಳಿದ ಜನರನ್ನು ಹೊರಗಿಟ್ಟಿದ್ದರಿಂದ ಅವರು ಐಸಿಸ್‌ನಂತಹ ಬಂಡುಕೋರರ ಸಂಘಟನೆ ಸೇರುತ್ತಾರೆ ಎಂದಿದ್ದರು.

ಬರ್ಲಿನ್‌ನಲ್ಲಿ ನಡೆದ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಆಯೋಜಿಸಿದ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ರಾಹುಲ್‌, ದೇಶವನ್ನು ಕಾಂಗ್ರೆಸ್‌ ಒಗ್ಗೂಡಿಸಿದರೆ, ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ ಎಂದಿದ್ದಾರೆ. ಸುದೀರ್ಘ‌ ಭಾಷಣಗಳಲ್ಲಿ ದ್ವೇಷಯುತ ಹೇಳಿಕೆಗಳನ್ನು ನೀಡಲಾಗುತ್ತಿದ್ದರೆ, ರೈತರು ಇನ್ನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಹಾಗೂ ಯುವಕರಿಗೆ ದೇಶದಲ್ಲಿ ಯಾವುದೇ ಭವಿಷ್ಯವೇ ಕಾಣಿಸುತ್ತಿಲ್ಲ ಎಂದೂ ರಾಹುಲ್‌ ಟೀಕಿಸಿದ್ದಾರೆ. ಚೀನಾ 24 ಗಂಟೆಗಳಲ್ಲಿ 50 ಸಾವಿರ ಜನರಿಗೆ ಉದ್ಯೋಗ ನೀಡಿದರೆ, ಈ ಅವಧಿಯಲ್ಲಿ ಭಾರತ ಕೇವಲ 450 ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನೊಂದೆಡೆ 2019ರಲ್ಲಿ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ ಎಂದು ರಾಹುಲ್‌ ಹೇಳಿದ್ದಾರೆ. ಪ್ರಧಾನಿ ಮೋದಿ ಬಿಜೆಪಿ ಆಡಳಿತದ ರಾಜ್ಯಗಳಿಗೆ ಬೆಂಬಲ ನೀಡಿ, ಬಿಜೆಪಿಯೇತರ ರಾಜ್ಯಗಳ ಅಭಿವೃದ್ಧಿಯನ್ನು ಕುಂಠಿತಗೊಳಿಸಲು ಬಯಸುತ್ತಿದ್ದಾರೆ. ಪಾಕಿಸ್ತಾನ ಕುರಿತಂತೆ ಮೋದಿ ಯಾವುದೇ ಸ್ಪಷ್ಟ ನೀತಿಯನ್ನು ಹೊಂದಿಲ್ಲ ಎಂದೂ ಆರೋಪಿಸಿರುವ ರಾಹುಲ್‌, ಡೋಕ್ಲಾಂನಲ್ಲಿ ಚೀನೀ ಸೇನೆ ಇನ್ನೂ ಇದ್ದು, ಪ್ರಧಾನಿ ಮೋದಿ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದೂ ದೂರಿದ್ದಾರೆ.

ಪಾಕಿಸ್ತಾನ ಉಗ್ರರ ದಾಳಿ ನಿಲ್ಲಿಸುವವರೆಗೂ ಮಾತುಕತೆ ಅಸಾಧ್ಯ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ. ಅದರ ಅರಿವಿಲ್ಲದೆ, ರಾಹುಲ್‌ ಶಾಂತಿ ಮಾತುಕತೆ ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.

 

 

 

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

8 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

9 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

10 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

10 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

11 hours ago