ಉಡುಪಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಹೊಸದಿಲ್ಲಿ:  ಅರಬ್‌ ದೇಶಗಳಲ್ಲಿನ ಮುಸ್ಲಿಮ್‌ ಬ್ರದರ್‌ಹುಡ್‌ನ‌ ಸಿದ್ಧಾಂತವನ್ನೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌)ವೂ ಹೊಂದಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬರ್ಲಿನ್‌ನಲ್ಲಿ ಹೇಳಿರುವುದು ಇದೀಗ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಈಜಿಪ್ಟ್ನಲ್ಲಿ ಹುಟ್ಟಿಕೊಂಡ ಮುಸ್ಲಿಂ ಬ್ರದರ್‌ಹುಡ್‌ ಎಂಬ ಸುನ್ನಿ ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಪರಿಗಣಿಸಲಾಗಿದ್ದು, ಈಗಾಗಲೇ ರಷ್ಯಾ ಸೇರಿದಂತೆ ಆರಕ್ಕೂ ಹೆಚ್ಚು ದೇಶಗಳಲ್ಲಿ ನಿಷೇಧಗೊಂಡಿದೆ. ಜರ್ಮನಿಯಲ್ಲಿ ಗುರುವಾರ ಮಾತನಾಡಿದ್ದ ರಾಹುಲ್‌, ಅಭಿವೃದ್ಧಿಯಿಂದ ಹಿಂದುಳಿದ ಜನರನ್ನು ಹೊರಗಿಟ್ಟಿದ್ದರಿಂದ ಅವರು ಐಸಿಸ್‌ನಂತಹ ಬಂಡುಕೋರರ ಸಂಘಟನೆ ಸೇರುತ್ತಾರೆ ಎಂದಿದ್ದರು.

ಬರ್ಲಿನ್‌ನಲ್ಲಿ ನಡೆದ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಆಯೋಜಿಸಿದ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ರಾಹುಲ್‌, ದೇಶವನ್ನು ಕಾಂಗ್ರೆಸ್‌ ಒಗ್ಗೂಡಿಸಿದರೆ, ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ ಎಂದಿದ್ದಾರೆ. ಸುದೀರ್ಘ‌ ಭಾಷಣಗಳಲ್ಲಿ ದ್ವೇಷಯುತ ಹೇಳಿಕೆಗಳನ್ನು ನೀಡಲಾಗುತ್ತಿದ್ದರೆ, ರೈತರು ಇನ್ನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಹಾಗೂ ಯುವಕರಿಗೆ ದೇಶದಲ್ಲಿ ಯಾವುದೇ ಭವಿಷ್ಯವೇ ಕಾಣಿಸುತ್ತಿಲ್ಲ ಎಂದೂ ರಾಹುಲ್‌ ಟೀಕಿಸಿದ್ದಾರೆ. ಚೀನಾ 24 ಗಂಟೆಗಳಲ್ಲಿ 50 ಸಾವಿರ ಜನರಿಗೆ ಉದ್ಯೋಗ ನೀಡಿದರೆ, ಈ ಅವಧಿಯಲ್ಲಿ ಭಾರತ ಕೇವಲ 450 ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನೊಂದೆಡೆ 2019ರಲ್ಲಿ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ ಎಂದು ರಾಹುಲ್‌ ಹೇಳಿದ್ದಾರೆ. ಪ್ರಧಾನಿ ಮೋದಿ ಬಿಜೆಪಿ ಆಡಳಿತದ ರಾಜ್ಯಗಳಿಗೆ ಬೆಂಬಲ ನೀಡಿ, ಬಿಜೆಪಿಯೇತರ ರಾಜ್ಯಗಳ ಅಭಿವೃದ್ಧಿಯನ್ನು ಕುಂಠಿತಗೊಳಿಸಲು ಬಯಸುತ್ತಿದ್ದಾರೆ. ಪಾಕಿಸ್ತಾನ ಕುರಿತಂತೆ ಮೋದಿ ಯಾವುದೇ ಸ್ಪಷ್ಟ ನೀತಿಯನ್ನು ಹೊಂದಿಲ್ಲ ಎಂದೂ ಆರೋಪಿಸಿರುವ ರಾಹುಲ್‌, ಡೋಕ್ಲಾಂನಲ್ಲಿ ಚೀನೀ ಸೇನೆ ಇನ್ನೂ ಇದ್ದು, ಪ್ರಧಾನಿ ಮೋದಿ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದೂ ದೂರಿದ್ದಾರೆ.

ಪಾಕಿಸ್ತಾನ ಉಗ್ರರ ದಾಳಿ ನಿಲ್ಲಿಸುವವರೆಗೂ ಮಾತುಕತೆ ಅಸಾಧ್ಯ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ. ಅದರ ಅರಿವಿಲ್ಲದೆ, ರಾಹುಲ್‌ ಶಾಂತಿ ಮಾತುಕತೆ ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.

 

 

 

 

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

2 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

2 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

2 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

4 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

4 hours ago