Featured

ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ : ಡಿ.ಕೆ ಶಿ – Vishwanews24

ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ : ಡಿ.ಕೆ ಶಿ

ಮೈಸೂರು: ಯಾರು ಶಾಂತಿ ಕದಲುತ್ತಿದ್ದಾರೋ ಅವರು ಇದನ್ನು ಗಮನಿಸಬೇಕು. ಕರ್ನಾಟಕದಲ್ಲಿನ ಶಾಂತಿಯ ವಿಚಾರ ಬಗ್ಗೆ ಸಿಎಂ ಅವರನ್ನು ಪ್ರಶ್ನಿಸಿ. ಕುವೆಂಪು ಅವರು ಹೇಳಿದ ರೀತಿ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಯಾರು ಸಹ ಅರ್ಜಿ ಹಾಕಿ ಹುಟ್ಟುವುದಿಲ್ಲ. ಎಲ್ಲಾ ಭಗವಂತನ ಪ್ರೇರೇಪಣೆ. ಈಗ ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ ಎಂದು ಬಾಗಲಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ಪರಿಹಾರದ ಹಣ ತೂರಿದ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಪತ್ನಿ ಜೊತೆ ಡಿಕೆಶಿಯವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಇದೇ ವೇಳೆ ಸಿದ್ದರಾಮೋತ್ಸವ ವಿಚಾರ ಸಂಬಂಧ ಮಾತನಾಡಿ, ಅದು ಬರೀ ಹುಟ್ಟುಹಬ್ಬದ ವಿಚಾರ ಅಲ್ಲ. ಅದರ ಮೂಲಕ ಕಾಂಗ್ರೆಸ್ ಸರ್ಕಾರ ಆಡಳಿತ ಸಂದರ್ಭದ ಪ್ರಗತಿಗಳ ಬಗ್ಗೆ ಮೆಲುಕು ಹಾಕುತ್ತೇವೆ. ನಮ್ಮ ಆಡಳಿತ ಅವಧಿಯಲ್ಲಿ ಏನಾಗಿತ್ತು, ಈಗ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಜನರಿಗೆ ಆ ಮೂಲಕ ವಿವರಿಸುತ್ತೇವೆ. ಬಿಜೆಪಿಯವರು ವಿನಾಕಾರಣ ಇದರ ಬಗ್ಗೆ ಮಾತನಾಡುತ್ತಿದ್ದಾರೆ ಅಷ್ಟೇ ಎಂದರು.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ 350ಕಿ.ಮಿ ಯಾತ್ರೆ ನಡೆಯುತ್ತದೆ. ಅದರ ರೂಪುರೇಷೆಗಳು ಈಗ ಸಿದ್ಧವಾಗುತ್ತಿವೆ. ಕೇರಳದಿಂದ ಕರ್ನಾಟಕಕ್ಕೆ ಯಾತ್ರೆ ಬರಲಿದೆ. ಅದರ ಎಲ್ಲಾ ರೂಪುರೇಷೆಗಳು ಶೀಘ್ರದಲ್ಲೇ ಅಂತಿಮವಾಗುತ್ತೆ. ಜುಲೈ19ರಂದು ಮೈಸೂರಿಗೆ ಬಂದು ಅದರ ಪೂರ್ವಾಭಾವಿ ಸಭೆಗಳನ್ನು ನಡೆಸುತ್ತೇನೆ. ಎಂದು ತಿಳಿಸಿದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

5 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

5 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

5 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

20 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

21 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 hours ago