ಮೈಸೂರು: ಯಾರು ಶಾಂತಿ ಕದಲುತ್ತಿದ್ದಾರೋ ಅವರು ಇದನ್ನು ಗಮನಿಸಬೇಕು. ಕರ್ನಾಟಕದಲ್ಲಿನ ಶಾಂತಿಯ ವಿಚಾರ ಬಗ್ಗೆ ಸಿಎಂ ಅವರನ್ನು ಪ್ರಶ್ನಿಸಿ. ಕುವೆಂಪು ಅವರು ಹೇಳಿದ ರೀತಿ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಯಾರು ಸಹ ಅರ್ಜಿ ಹಾಕಿ ಹುಟ್ಟುವುದಿಲ್ಲ. ಎಲ್ಲಾ ಭಗವಂತನ ಪ್ರೇರೇಪಣೆ. ಈಗ ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ ಎಂದು ಬಾಗಲಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ಪರಿಹಾರದ ಹಣ ತೂರಿದ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.
ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಪತ್ನಿ ಜೊತೆ ಡಿಕೆಶಿಯವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಇದೇ ವೇಳೆ ಸಿದ್ದರಾಮೋತ್ಸವ ವಿಚಾರ ಸಂಬಂಧ ಮಾತನಾಡಿ, ಅದು ಬರೀ ಹುಟ್ಟುಹಬ್ಬದ ವಿಚಾರ ಅಲ್ಲ. ಅದರ ಮೂಲಕ ಕಾಂಗ್ರೆಸ್ ಸರ್ಕಾರ ಆಡಳಿತ ಸಂದರ್ಭದ ಪ್ರಗತಿಗಳ ಬಗ್ಗೆ ಮೆಲುಕು ಹಾಕುತ್ತೇವೆ. ನಮ್ಮ ಆಡಳಿತ ಅವಧಿಯಲ್ಲಿ ಏನಾಗಿತ್ತು, ಈಗ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಜನರಿಗೆ ಆ ಮೂಲಕ ವಿವರಿಸುತ್ತೇವೆ. ಬಿಜೆಪಿಯವರು ವಿನಾಕಾರಣ ಇದರ ಬಗ್ಗೆ ಮಾತನಾಡುತ್ತಿದ್ದಾರೆ ಅಷ್ಟೇ ಎಂದರು.
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ 350ಕಿ.ಮಿ ಯಾತ್ರೆ ನಡೆಯುತ್ತದೆ. ಅದರ ರೂಪುರೇಷೆಗಳು ಈಗ ಸಿದ್ಧವಾಗುತ್ತಿವೆ. ಕೇರಳದಿಂದ ಕರ್ನಾಟಕಕ್ಕೆ ಯಾತ್ರೆ ಬರಲಿದೆ. ಅದರ ಎಲ್ಲಾ ರೂಪುರೇಷೆಗಳು ಶೀಘ್ರದಲ್ಲೇ ಅಂತಿಮವಾಗುತ್ತೆ. ಜುಲೈ19ರಂದು ಮೈಸೂರಿಗೆ ಬಂದು ಅದರ ಪೂರ್ವಾಭಾವಿ ಸಭೆಗಳನ್ನು ನಡೆಸುತ್ತೇನೆ. ಎಂದು ತಿಳಿಸಿದರು.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…