Featured

ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ : ಡಿ.ಕೆ ಶಿ – Vishwanews24

ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ : ಡಿ.ಕೆ ಶಿ

ಮೈಸೂರು: ಯಾರು ಶಾಂತಿ ಕದಲುತ್ತಿದ್ದಾರೋ ಅವರು ಇದನ್ನು ಗಮನಿಸಬೇಕು. ಕರ್ನಾಟಕದಲ್ಲಿನ ಶಾಂತಿಯ ವಿಚಾರ ಬಗ್ಗೆ ಸಿಎಂ ಅವರನ್ನು ಪ್ರಶ್ನಿಸಿ. ಕುವೆಂಪು ಅವರು ಹೇಳಿದ ರೀತಿ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಯಾರು ಸಹ ಅರ್ಜಿ ಹಾಕಿ ಹುಟ್ಟುವುದಿಲ್ಲ. ಎಲ್ಲಾ ಭಗವಂತನ ಪ್ರೇರೇಪಣೆ. ಈಗ ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ ಎಂದು ಬಾಗಲಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ಪರಿಹಾರದ ಹಣ ತೂರಿದ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಪತ್ನಿ ಜೊತೆ ಡಿಕೆಶಿಯವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಇದೇ ವೇಳೆ ಸಿದ್ದರಾಮೋತ್ಸವ ವಿಚಾರ ಸಂಬಂಧ ಮಾತನಾಡಿ, ಅದು ಬರೀ ಹುಟ್ಟುಹಬ್ಬದ ವಿಚಾರ ಅಲ್ಲ. ಅದರ ಮೂಲಕ ಕಾಂಗ್ರೆಸ್ ಸರ್ಕಾರ ಆಡಳಿತ ಸಂದರ್ಭದ ಪ್ರಗತಿಗಳ ಬಗ್ಗೆ ಮೆಲುಕು ಹಾಕುತ್ತೇವೆ. ನಮ್ಮ ಆಡಳಿತ ಅವಧಿಯಲ್ಲಿ ಏನಾಗಿತ್ತು, ಈಗ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಜನರಿಗೆ ಆ ಮೂಲಕ ವಿವರಿಸುತ್ತೇವೆ. ಬಿಜೆಪಿಯವರು ವಿನಾಕಾರಣ ಇದರ ಬಗ್ಗೆ ಮಾತನಾಡುತ್ತಿದ್ದಾರೆ ಅಷ್ಟೇ ಎಂದರು.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ 350ಕಿ.ಮಿ ಯಾತ್ರೆ ನಡೆಯುತ್ತದೆ. ಅದರ ರೂಪುರೇಷೆಗಳು ಈಗ ಸಿದ್ಧವಾಗುತ್ತಿವೆ. ಕೇರಳದಿಂದ ಕರ್ನಾಟಕಕ್ಕೆ ಯಾತ್ರೆ ಬರಲಿದೆ. ಅದರ ಎಲ್ಲಾ ರೂಪುರೇಷೆಗಳು ಶೀಘ್ರದಲ್ಲೇ ಅಂತಿಮವಾಗುತ್ತೆ. ಜುಲೈ19ರಂದು ಮೈಸೂರಿಗೆ ಬಂದು ಅದರ ಪೂರ್ವಾಭಾವಿ ಸಭೆಗಳನ್ನು ನಡೆಸುತ್ತೇನೆ. ಎಂದು ತಿಳಿಸಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago