Featured

ಮುಸ್ಲಿಂ ಯುವಕನಿಂದ ಪೆಟ್ರೋಲ್ ಇಲ್ಲದೇ 150 ಕಿ.ಮೀ ಚಲಿಸುವ ವಿಶೇಷ ‘ಮೋದಿ ಬೈಕ್’..

ಮೀರತ್: ಪೆಟ್ರೋಲ್ ಮತ್ತು ಡೀಸೆಲ್ ದರಗಳು ಗಗನಕ್ಕೇರಿರುವ ಈ ಹೊತ್ತಿನಲ್ಲಿ ಪೆಟ್ರೋಲೇ ಇಲ್ಲದೇ ಬರೊಬ್ಬರಿ 150 ಕಿ.ಮೀ ಸಾಗುವ ನೂತನ ಬೈಕ್ ವೊಂದನ್ನು ಮೀರತ್ ನ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕಂಡು ಹಿಡಿದಿದ್ದಾನೆ.
ಈ ಮುಸ್ಲಿಂ ಯುವಕನಿಗೆ ಪ್ರಧಾನಿ ನರೇಂದ್ರ ಮೋದಿ ಎಂದರೆ ಅಚ್ಚು ಮೆಚ್ಚು. ದೇಶಕ್ಕಾಗಿ ಏನನ್ನಾದರೂ ಸಾಧಿಸಬೇಕು ಎಂದು ಹಂಬಲಿಸುತ್ತಿದ್ದ ಯುವಕ ವಿದ್ಯುತ್ ಚಾಲಿತ ಬೈಕ್ ಕಂಡುಹಿಡಿದಿದ್ದಾರೆ.
ಈ ವಿಶೇಷ ಬ್ಯಾಟರಿ ಚಾಲಿತ ಇ-ಬೈಕ್ ಅನ್ನು ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಎಂಜಿನಿಯರಿಂಗ್ ವಿದ್ಯಾರ್ಥಿ ವಕಾರ್ ಅಹಮದ್ ಸಂಶೋಧಿಸಿದ್ದು, ಈ ವಿಶೇಷ ಬೈಕ್ ಗೆ ‘ಮೋದಿ ಬೈಕ್’ ಎಂದು ನಾಮಕರಣ ಮಾಡಿದ್ದಾನೆ. ಸ್ವತಃ ಮೆಕಾನಿಕಲ್ ಎಂಜಿನಿಯಪ್ ಆಗಿರುವ ವಕಾರ್ ಅಹ್ಮದ್  ತನ್ನ ವಿದ್ಯಾಭ್ಯಾಸವನ್ನೇ ಬಂಡವಾಳವಾಗಿಸಿಕೊಂಡು ವಿಶೇಷ ಇ-ಬೈಕ್ ಆವಿಷ್ಕರಣೆಗೆ ಮುಂದಾಗಿದ್ದಾನೆ.
ತನ್ನ ನಿರಂತರ ಪರಿಶೋಧನೆ ಮತ್ತು ಪರಿಶ್ರಮದ ಫಲವಾಗಿ ವಕಾರ್ ಇದೀಗ ವಿಶೇಷ ಬೈಕ್ ತಯಾರಿಸಿದ್ದು, ಈ ಬ್ಯಾಟರಿ ಚಾಲಿತ ಬೈಕ್ ಅನ್ನು 3 ಗಂಟೆ ಚಾರ್ಜ್ ಮಾಡಿದರೆ ಸಾಕು ಬರೊಬ್ಬರಿ 150 ಕಿ.ಮೀ ಚಲಿಸಲಿದೆ. ಪ್ರಸ್ತುತ ಆಟೋ ಮೊಬೈಲ್ ಇಂಜಿನಿಯರಿಂಗ್ ಮಾಡುತ್ತಿದ್ದ ಯುವಕ ಕಂಡುಹಿಡಿದ ಬೈಕ್ ಈಗ ರಸ್ತೆಯಲ್ಲಿ ಸುತ್ತಾಡುತ್ತಿದ್ದು, ಪೆಟ್ರೋಲ್ ಇಲ್ಲದೇ ಚಲಿಸುತ್ತಿರುವ ಬೈಕ್ ನೋಡಿ ಜನ ಅಚ್ಚರಿ ಪಡುತ್ತಿದ್ದಾರೆ.  ಪ್ರಧಾನಿ ಸಹ ಶಹಬ್ಬಾಸ್ ನೀಡಿದ್ದಾರೆ. ಈ ಬೈಕ್‌ ಗೆ ಇಂಜಿನ್ ಇಲ್ಲ. ಲ್ಯಾಟ್ ಟಾಪ್ ಅಥವ ಮೊಬೈಲ್ ರೀತಿ ಜಾರ್ಜ್ ಹಾಕಬೇಕು.
ಈ ಬಗ್ಗೆ ಹೆಮ್ಮೆಯಿಂದ ಮಾತನಾಡಿರುವ ಬೈಕ್ ಸಂಶೋಧಕ ವಕಾರ್ ಅಹ್ಮದ್, ‘ಈ ಬೈಕ್‌ ಗೆ  ಇಂಜಿನ್ ಇಲ್ಲ. ಲ್ಯಾಟ್ ಟಾಪ್ ಅಥವಾ ಮೊಬೈಲ್ ರೀತಿ ಜಾರ್ಜ್ ಹಾಕಬೇಕು. ಮೂರು ಗಂಟೆ ಜಾರ್ಜ್  ಮಾಡಿದರೆ 150 ಕಿಮೀ ಸಂಚಾರ ಸಾಧ್ಯ. ಇದಕ್ಕೆ ಕೇವಲ  20 ರೂ. ಖರ್ಚು ತಗಲುತ್ತದೆ. ಅಂದರೆ ಕೇವಲ 20 ರೂ. ವೆಚ್ಚದಲ್ಲಿ 150 ಕಿ ಮೀ ಪ್ರಯಾಣ ಮಾಡಬಹುದು. ನನಗೆ ಪ್ರಧಾನಿ ಮೋದಿ ಎಂದರೆ ಅಚ್ಚು ಮೆಚ್ಚು ಹೀಗಾಗಿ ಈ ವಿಶೇಷ ಬೈಕ್ ಗೆ ಮೋದಿ ಬೈಕ್ ಎಂದು ನಾಮಕರಣ ಮಾಡಿದ್ದೇನೆ. ಈ ಬೈಕ್ ದರ  70 ರಿಂದ 75 ಸಾವಿರ ರೂ. ಆಗಲಿದ್ದು ಮಾರುಕಟ್ಟೆಗೆ ತರುವ ಪ್ರಯತ್ನಗಳು ನಡೆಯುತ್ತಿದೆ. ಈಗಾಗಲೇ ಈ ಸಂಬಂಧ ಹಲವು ಕಂಪನಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಶೀಘ್ರ ಒಪ್ಪಂದ ಮಾಡಿಕೊಂಡು ಈ ಬೈಕ್ ಅನ್ನು ಮಾರುಕಟ್ಟೆಗೆ ಪರಿಚಯಿಸುತ್ತೇನೆ ಎಂದು ಹೇಳಿದ್ದಾರೆ.
Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

38 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

49 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

54 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

1 hour ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago