Featured

ಮುಸ್ಲಿಂ ರಾಜ ಶ್ರೀ ಕೃಷ್ಣ ಮಠಕ್ಕೆ ಜಾಗ ನೀಡಿದ್ದು ಉಡುಪಿಯಲ್ಲಿ ಅಲ್ಲ, ಗಂಗಾ ತೀರದಲ್ಲಿ :  ಪೇಜಾವರ ಶ್ರೀ ಸ್ಪಷ್ಟನೆ

ಹೇಳಿಕೆಯನ್ನು ಕೊಡಬೇಕು ಅಂತಾದ್ರೆ ಅದಕ್ಕೆ ಸರಿಯಾದ ಆಧಾರ ನೀಡಬೇಕು…

ಮುಸ್ಲಿಂ ರಾಜ ಶ್ರೀ ಕೃಷ್ಣ ಮಠಕ್ಕೆ ಜಾಗ ನೀಡಿದ್ದು ಉಡುಪಿಯಲ್ಲಿ ಅಲ್ಲ, ಗಂಗಾ ತೀರದಲ್ಲಿ ..

ಮಿಥುನ್ ರೈ ಹೇಳಿಕೆಗೆ ಪೇಜಾವರ ಶ್ರೀ ಸ್ಪಷ್ಟನೆ..

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಈ ವಿವಾದಕ್ಕೆ ತುಮಕೂರು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದು, ವಿವಾದಕ್ಕೆ ತೆರೆ ಎಳೆದಿದ್ದಾರೆ.

ಮುಸ್ಲಿಂ ರಾಜ ಶ್ರೀ ಕೃಷ್ಣ ಮಠಕ್ಕೆ ಜಾಗ ನೀಡಿದ್ದು , ಉಡುಪಿಯಲ್ಲಿ ಅಲ್ಲ, ಗಂಗಾ ತೀರದಲ್ಲಿ ಎಂದು ಹೇಳಿದ್ದಾರೆ.ಈ ಬಗ್ಗೆ ಮಾತನಾಡಿದ ಪೇಜಾವರ ಶ್ರೀ ಗಳು ಯಾರೂ ಯಾವ ಹೇಳಿಕೆಯನ್ನಾದರೂ ಕೊಡಬಹುದು. ಆದರೆ ಅಂತಹ ಹೇಳಿಕೆಯನ್ನು ಕೊಡಬೇಕು ಅಂತಾದ್ರೆ ಅದಕ್ಕೆ ಸರಿಯಾದ ಆಧಾರ ನೀಡಬೇಕು. ಮಧ್ವಾಚಾರ್ಯರ ಕಾಲದಲ್ಲಿ ಆ ಘಟನೆ ನಡೆದಿದ್ದು, ಉಡುಪಿಯಲ್ಲಿ ಅಲ್ಲ, ಗಂಗಾ ನದಿ ತೀರದಲ್ಲಿ. ಗುರುಗಳ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಪೇಜಾವರ ಹಿರಿಯ ಶ್ರೀಗಳಾಗಿದ್ದ ಶ್ರೀ ವಿಶ್ವೇಷ ತೀರ್ಥ ಶ್ರೀ ಪಾದರು ಹೇಳಿದ ಒಂದು ವಿಚಾರವನ್ನು ತಪ್ಪಾಗಿ ಗ್ರಹಿಸಿ ಅದನ್ನು ಉಡುಪಿಗೆ ಜೋಡಿಸಲಾಗುತ್ತಿದೆ ಎಂದಿದ್ದಾರೆ. ಇದನ್ನು ಮುಂದುವರೆಸಬೇಡಿ ಇಲ್ಲಿಗೆ ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಮೂಡಬಿದರೆ ತಾಲೂಕಿನ ಪುತ್ತಿಗೆಯಲ್ಲಿ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಮಿಥುನ್ ರೈ ಅವರು, ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು, ಮುಸಲ್ಮಾನ ರಾಜರು ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago