ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸುವ ನಿಟ್ಟಿನಲ್ಲಿ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 ಅನ್ನು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರ ರದ್ದುಗೊಳಿಸಲು ನಿರ್ಧರಿಸಿದೆ.
ಶುಕ್ರವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಜಯಂತ್ ಮಲ್ಲಬರುವ, ಮುಸ್ಲಿಂ ವಿವಾಹ ಕಾಯ್ದೆ ರದ್ದತಿ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು. ಏಕರೂಪ ನಾಗರಿಕ ಸಂಹಿತೆ ನಿಟ್ಟಿನಲ್ಲಿ ಇದೊಂದು ದೊಡ್ಡ ಹೆಜ್ಜೆ. ಇನ್ನು ಮುಂದೆ ರಾಜ್ಯದಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನಗಳ ನೋಂದಣಿಯನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ನೋಂದಣಾಧಿಕಾರಿಗಳು ಮಾಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ಸದ್ಯ ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿರುವ 94 ಮುಸ್ಲಿಂ ರಿಜಿಸ್ಟ್ರಾರ್ಗಳನ್ನು ತೆಗೆದುಹಾಕಲಾಗುವುದು. ಅವರೆಲ್ಲರಿಗೂ ತಲಾ 2 ಲಕ್ಷ ರೂಪಾಯಿಗಳ ಒಂದು ಬಾರಿಯ ಪರಿಹಾರವನ್ನು ನೀಡಲಾಗುವುದು ಎಂದು ಮಲ್ಲಬರುವ ಹೇಳಿದರು.
2024ರ ಫೆಬ್ರವರಿ 23ರಂದು ಅಸ್ಸಾಂ ಕ್ಯಾಬಿನೆಟ್ ಹಳೆಯ ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಾಯ್ದೆಯು ವಧು ಮತ್ತು ವರರು ಕ್ರಮವಾಗಿ 18 ಮತ್ತು 21 ರ ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಸಹ ವಿವಾಹ ನೋಂದಣಿಗೆ ಅವಕಾಶ ನೀಡುವ ನಿಬಂಧನೆಗಳನ್ನು ಒಳಗೊಂಡಿತ್ತು.
ಈಗ ನಾವು ಕೈಗೊಂಡಿರುವ ಕ್ರಮವು ಅಸ್ಸಾಂನಲ್ಲಿ ಬಾಲ್ಯ ವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…