Featured

ಮುಸ್ಲಿಂ ವಿಸ್ತಾರವಾದ ಮತ್ತು ಪ್ರತ್ಯೇಕವಾದ ದೇಶಕ್ಕೆ ಮಾರಕ ಮತ್ತು ಗಂಡಾಂತರ : ಪ್ರಮೋದ್ ಮುತಾಲಿಕ್ – Vishwanews24

ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಶ್ರೀರಾಮ ಸೇನೆಯಿಂದ ರಾಜ್ಯಾದ್ಯಂತ ಆಂದೋಲನ

ಮುಸ್ಲಿಂ ಮಾನಸಿಕತೆ ಬದಲಾಗುವವರೆಗೆ ಈ ರೀತಿಯ ಸಂಘರ್ಷ- ದ್ವೇಷ ನಿರಂತರವಾಗಿ ಇರುತ್ತದೆ

ಮುಸ್ಲಿಂ ವಿಸ್ತಾರವಾದ ಮತ್ತು ಪ್ರತ್ಯೇಕವಾದ ದೇಶಕ್ಕೆ ಮಾರಕ ಮತ್ತು ಗಂಡಾಂತರ..

ಬೆಳಗಾವಿ: ಮುಸ್ಲಿಮರ ಮೇಲೆ ‘ಆರ್ಥಿಕ ಬಹಿಷ್ಕಾರ’ಕ್ಕೆ ಶ್ರೀರಾಮ ಸೇನೆಯಿಂದ ದೊಡ್ಡ ಮಟ್ಟದ ಆಂದೋಲನವನ್ನು ರಾಜ್ಯದಾದ್ಯಂತ ನಡೆಸಲಾಗುವುದು’ ಎಂದು ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಜಾತ್ರೆಯಲ್ಲಿ ಮತ್ತು ದೇವಸ್ಥಾನಗಳ ಆವರಣದಲ್ಲಿ ಮುಸ್ಲಿಂ ವರ್ತಕರಿಗೆ ನಿರ್ಬಂಧ ಹೇರಿರುವುದಕ್ಕೆ ಸಂಘಟನೆಯ ಬೆಂಬಲವಿದೆ’ ಎಂದರು.

‘ಮುಸ್ಲಿಮರ ಜೊತೆ ವ್ಯಾಪಾರ-ವ್ಯವಹಾರಕ್ಕೆ ಆರ್ಥಿಕ ಬಹಿಷ್ಕಾರ ರಾಜ್ಯದಾದ್ಯಂತ ಹಬ್ಬಿದೆ. ಮುಸ್ಲಿಂ ಮಾನಸಿಕತೆ ಬದಲಾಗುವವರೆಗೆ ಈ ರೀತಿಯ ಸಂಘರ್ಷ- ದ್ವೇಷ ನಿರಂತರವಾಗಿ ಇರುವುದೇ. ಮುಸ್ಲಿಂ ವಿಸ್ತಾರವಾದ ಮತ್ತು ಪ್ರತ್ಯೇಕವಾದ ದೇಶಕ್ಕೆ ಮಾರಕ ಮತ್ತು ಗಂಡಾಂತರವಾಗಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಮರೊಂದಿಗ ವ್ಯಾಪಾರಕ್ಕೆ ಬಹಿಷ್ಕಾರ ಹಾಕಲಾಗುತ್ತಿದೆ’ ಎಂದರು.

ನ್ಯಾಯಾಲಯಕ್ಕೂ ಗೌರವ ನೀಡಿಲ್ಲ: ‘ಲವ್‌ಜಿಹಾದ್, ಹಿಂದೂ ನಾಯಕರ ಕೊಲೆ ಮೊದಲಾದ ಮುಸ್ಲಿಮರ ಕ್ರೌರ್ಯ ಮತ್ತು ಮಾನಸಿಕತೆ ಹಿಂದಿನಿಂದಲೂ ಇದೆ. ಅದನ್ನು ನಿಲ್ಲಿಸುವವರೆಗೆ ಬಹಿಷ್ಕಾರದಂತಹ ಪ್ರಕ್ರಿಯೆ ನಡೆಯುತ್ತದೆ. ಮುಂದಿನ ದಿನಗಳಲ್ಲಿ ಇತರ ವ್ಯಾಪಾರ-ವ್ಯವಹಾರ ಹಾಗೂ ಆಟೊರಿಕ್ಷಾ ಏರದಿರುವುದು ಮೊದಲಾದವುಗಳಿಗೂ ಸಂಪೂರ್ಣ ಬಹಿಷ್ಕಾರ ಹಾಕುತ್ತೇವೆ. ಮುಸ್ಲಿಮರು ಗೋಮಾಂಸ ತಿನ್ನುವುದು ಮತ್ತು ಗೋಹತ್ಯೆ ನಿಲ್ಲಿಸುವವರೆಗೆ ಮುಂದುವರಿಯುತ್ತದೆ’ ಎಂದು ಹೇಳಿದರು.

‘ಸಂವಿಧಾನದ ಆಧಾರದ ಮೇಲೆ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಅವು ನೀಡುವ ತೀರ್ಪನ್ನೂ ಆ ಸಮಾಜ ಒಪ್ಪುತ್ತಿಲ್ಲ; ಕಾನೂನಿಗೆ ಗೌರವ ಕೊಡುತ್ತಿಲ್ಲ. ಹಿಜಾಬ್‌ ವಿಷಯದಲ್ಲಿ ನ್ಯಾಯಾಲಯಕ್ಕೆ ಹೋದವರು ಮುಸ್ಲಿಂ ವಿದ್ಯಾರ್ಥಿನಿಯರೆ. ಹೈಕೋರ್ಟ್‌ ನೀಡಿದ ಮಧ್ಯಂತರ ಹಾಗೂ ಅಂತಿಮ ತೀರ್ಪುಗಳೆರಡನ್ನೂ ಧಿಕ್ಕರಿಸಿದ್ದಾರೆ. ಎಸ್‌ಡಿಪಿಐ, ಸಿಎಫ್‌ಐ, ಪಿಎಫ್‌ಐ ಎನ್ನುವ ದೇಶದ್ರೋಹಿ ಸಂಘಟನೆಗಳು, ಮುಲ್ಲಾ-ಮೌಲ್ವಿಗಳು ಕೂಡ ಧಿಕ್ಕರಿಸಿದ್ದಾರೆ. ನ್ಯಾಯಾಲಯದ ಆದೇಶ ಒಪ್ಪದೆ ಸೊಕ್ಕಿನ ಮಾತುಗಳನ್ನು ಆಡುತ್ತಿದ್ದಾರೆ. ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ಹಿಂದೂಗಳ ಅಂಗಡಿಯಲ್ಲಿ ಮುಸ್ಲಿಮರು ಮಾಂಸ ಖರೀದಿಸುವುದಿಲ್ಲ. ಪತಂಜಲಿ, ರಿಲಯನ್ಸ್‌ ಮೊದಲಾದ ಕಂಪನಿಗಳ ಉತ್ಪನ್ನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಮುಸ್ಲಿಂ ಮುಖಂಡರು ಹೇಳಿದ್ದರು. ಅದಕ್ಕೆ ಉತ್ತರವನ್ನು ಈಗ ಕೊಡುತ್ತಿದ್ದೇವೆ. ಕ್ರಿಯೆಗೆ ಪ್ರತಿಕ್ರಿಯೆ ಇದಾಗಿದೆ. ದೇಶದಲ್ಲಿ ಇರಬೇಕಾದರೆ ಸಂವಿಧಾನ-ಕಾನೂನು ಗೌರವಿಸಬೇಕು. ಬಹುಸಂಖ್ಯಾತ ಹಿಂದೂ ಸಮಾಜದ ಸಂಸ್ಕೃತಿ-ಸಂಪ್ರದಾಯವನ್ನು ಗೌರವದಿಂದ ಕಾಣಬೇಕು. ಇಲ್ಲವಾದರೆ ಎದುರಿಸಲಿ’ ಎಂದು ಸವಾಲು ಹಾಕಿದರು.

 

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

4 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

6 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

6 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

6 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

6 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago