ಬೆಳಗಾವಿ: ಮುಸ್ಲಿಮರ ಮೇಲೆ ‘ಆರ್ಥಿಕ ಬಹಿಷ್ಕಾರ’ಕ್ಕೆ ಶ್ರೀರಾಮ ಸೇನೆಯಿಂದ ದೊಡ್ಡ ಮಟ್ಟದ ಆಂದೋಲನವನ್ನು ರಾಜ್ಯದಾದ್ಯಂತ ನಡೆಸಲಾಗುವುದು’ ಎಂದು ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಜಾತ್ರೆಯಲ್ಲಿ ಮತ್ತು ದೇವಸ್ಥಾನಗಳ ಆವರಣದಲ್ಲಿ ಮುಸ್ಲಿಂ ವರ್ತಕರಿಗೆ ನಿರ್ಬಂಧ ಹೇರಿರುವುದಕ್ಕೆ ಸಂಘಟನೆಯ ಬೆಂಬಲವಿದೆ’ ಎಂದರು.
‘ಮುಸ್ಲಿಮರ ಜೊತೆ ವ್ಯಾಪಾರ-ವ್ಯವಹಾರಕ್ಕೆ ಆರ್ಥಿಕ ಬಹಿಷ್ಕಾರ ರಾಜ್ಯದಾದ್ಯಂತ ಹಬ್ಬಿದೆ. ಮುಸ್ಲಿಂ ಮಾನಸಿಕತೆ ಬದಲಾಗುವವರೆಗೆ ಈ ರೀತಿಯ ಸಂಘರ್ಷ- ದ್ವೇಷ ನಿರಂತರವಾಗಿ ಇರುವುದೇ. ಮುಸ್ಲಿಂ ವಿಸ್ತಾರವಾದ ಮತ್ತು ಪ್ರತ್ಯೇಕವಾದ ದೇಶಕ್ಕೆ ಮಾರಕ ಮತ್ತು ಗಂಡಾಂತರವಾಗಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಮರೊಂದಿಗ ವ್ಯಾಪಾರಕ್ಕೆ ಬಹಿಷ್ಕಾರ ಹಾಕಲಾಗುತ್ತಿದೆ’ ಎಂದರು.
ನ್ಯಾಯಾಲಯಕ್ಕೂ ಗೌರವ ನೀಡಿಲ್ಲ: ‘ಲವ್ಜಿಹಾದ್, ಹಿಂದೂ ನಾಯಕರ ಕೊಲೆ ಮೊದಲಾದ ಮುಸ್ಲಿಮರ ಕ್ರೌರ್ಯ ಮತ್ತು ಮಾನಸಿಕತೆ ಹಿಂದಿನಿಂದಲೂ ಇದೆ. ಅದನ್ನು ನಿಲ್ಲಿಸುವವರೆಗೆ ಬಹಿಷ್ಕಾರದಂತಹ ಪ್ರಕ್ರಿಯೆ ನಡೆಯುತ್ತದೆ. ಮುಂದಿನ ದಿನಗಳಲ್ಲಿ ಇತರ ವ್ಯಾಪಾರ-ವ್ಯವಹಾರ ಹಾಗೂ ಆಟೊರಿಕ್ಷಾ ಏರದಿರುವುದು ಮೊದಲಾದವುಗಳಿಗೂ ಸಂಪೂರ್ಣ ಬಹಿಷ್ಕಾರ ಹಾಕುತ್ತೇವೆ. ಮುಸ್ಲಿಮರು ಗೋಮಾಂಸ ತಿನ್ನುವುದು ಮತ್ತು ಗೋಹತ್ಯೆ ನಿಲ್ಲಿಸುವವರೆಗೆ ಮುಂದುವರಿಯುತ್ತದೆ’ ಎಂದು ಹೇಳಿದರು.
‘ಸಂವಿಧಾನದ ಆಧಾರದ ಮೇಲೆ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಅವು ನೀಡುವ ತೀರ್ಪನ್ನೂ ಆ ಸಮಾಜ ಒಪ್ಪುತ್ತಿಲ್ಲ; ಕಾನೂನಿಗೆ ಗೌರವ ಕೊಡುತ್ತಿಲ್ಲ. ಹಿಜಾಬ್ ವಿಷಯದಲ್ಲಿ ನ್ಯಾಯಾಲಯಕ್ಕೆ ಹೋದವರು ಮುಸ್ಲಿಂ ವಿದ್ಯಾರ್ಥಿನಿಯರೆ. ಹೈಕೋರ್ಟ್ ನೀಡಿದ ಮಧ್ಯಂತರ ಹಾಗೂ ಅಂತಿಮ ತೀರ್ಪುಗಳೆರಡನ್ನೂ ಧಿಕ್ಕರಿಸಿದ್ದಾರೆ. ಎಸ್ಡಿಪಿಐ, ಸಿಎಫ್ಐ, ಪಿಎಫ್ಐ ಎನ್ನುವ ದೇಶದ್ರೋಹಿ ಸಂಘಟನೆಗಳು, ಮುಲ್ಲಾ-ಮೌಲ್ವಿಗಳು ಕೂಡ ಧಿಕ್ಕರಿಸಿದ್ದಾರೆ. ನ್ಯಾಯಾಲಯದ ಆದೇಶ ಒಪ್ಪದೆ ಸೊಕ್ಕಿನ ಮಾತುಗಳನ್ನು ಆಡುತ್ತಿದ್ದಾರೆ. ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.
‘ಹಿಂದೂಗಳ ಅಂಗಡಿಯಲ್ಲಿ ಮುಸ್ಲಿಮರು ಮಾಂಸ ಖರೀದಿಸುವುದಿಲ್ಲ. ಪತಂಜಲಿ, ರಿಲಯನ್ಸ್ ಮೊದಲಾದ ಕಂಪನಿಗಳ ಉತ್ಪನ್ನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಮುಸ್ಲಿಂ ಮುಖಂಡರು ಹೇಳಿದ್ದರು. ಅದಕ್ಕೆ ಉತ್ತರವನ್ನು ಈಗ ಕೊಡುತ್ತಿದ್ದೇವೆ. ಕ್ರಿಯೆಗೆ ಪ್ರತಿಕ್ರಿಯೆ ಇದಾಗಿದೆ. ದೇಶದಲ್ಲಿ ಇರಬೇಕಾದರೆ ಸಂವಿಧಾನ-ಕಾನೂನು ಗೌರವಿಸಬೇಕು. ಬಹುಸಂಖ್ಯಾತ ಹಿಂದೂ ಸಮಾಜದ ಸಂಸ್ಕೃತಿ-ಸಂಪ್ರದಾಯವನ್ನು ಗೌರವದಿಂದ ಕಾಣಬೇಕು. ಇಲ್ಲವಾದರೆ ಎದುರಿಸಲಿ’ ಎಂದು ಸವಾಲು ಹಾಕಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…