ಬೆಂಗಳೂರು: ಹಿಜಬ್, ಹಲಾಲ್, ಅಜಾನ್ ಬೆನ್ನೆಲೆ ಇದೀಗ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಹಿಂದೂ ಪರ ಸಂಘಟನೆಗಳು ಅಭಿಯಾನ ಶುರುವಾಗಿದೆ.
ಮೇ 3ರಂದು ಅಕ್ಷಯ ತೃತೀಯ ಹಬ್ಬವಿದ್ದು, ಈ ವಿಶೇಷ ದಿನ ಸಾಮಾನ್ಯವಾಗಿ ಜನರು ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಈ ಹಿನ್ನೆಲೆ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಟ್ವಿಟ್ಟರ್ನಲ್ಲಿ ಹಿಂದೂ ಪರ ಸಂಘಟನೆಗಳು ಅಭಿಯಾನ ಪ್ರಾರಂಭವಾಗಿದೆ.
ರಾಜ್ಯದಲ್ಲಿ ಸರಿ ಸುಮಾರು ಮೂವತ್ತು ಸಾವಿರ ಚಿನ್ನದಂಗಡಿಗಳಿವೆ. ಅದರಲ್ಲಿ ಶೇಕಡಾ 30 ರಷ್ಟು ಮುಸ್ಲಿಂ ಮಾಲೀಕತ್ವದ ಮಳಿಗೆಗಳಿದ್ದು, ಬಹುತೇಕ ಮುಸ್ಲಿಂ ವ್ಯಾಪಾರಿಗಳು ಕೇರಳ ಮೂಲದ ಮುಸ್ಲಿಂ ವ್ಯಾಪಾರಿಗಳಾಗಿದ್ದಾರೆ. ಕಳೆದ ಎರಡು ವರ್ಷದಿಂದ ಕೊರೊನಾ ಹಿನ್ನೆಲೆ ವ್ಯಾಪಾರ ಡಲ್ ಆಗಿತ್ತು. ಆದರೆ ಈ ವರ್ಷದ ಅಕ್ಷಯ ತೃತೀಯಕ್ಕೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿ ಚಿನ್ನದ ಅಂಗಡಿ ಮಾಲೀಕರಿದ್ದಾರೆ.
ಅಕ್ಷಯ ತೃತೀಯ ದಿನದಂದೇ ರಾಜ್ಯಾದ್ಯಂತ ಬರೋಬ್ಬರಿ ಒಂದು ಸಾವಿರ ಕೋಟಿ ವ್ಯಾಪಾರವಾಗುಚ ನಿರೀಕ್ಷೆಯನ್ನು ಮಾಲೀಕರು ಹೊಂದಿದ್ದಾರೆ. ಸದ್ಯ ಶುರುವಾಗಿರುವ ಅಭಿಯಾನದಿಂದ ಯಾರಿಗೆ ನಷ್ಟ, ಯಾರಿಗೆ ಲಾಭ ಎನ್ನುವ ಲೆಕ್ಕಾಚಾರ ಆರಂಭವಾಗಿದ್ದು, ಒಂದು ವೇಳೆ ಅಭಿಯಾನ ಸಕ್ಸಸ್ ಆದರೆ, ನೂರಾರು ಕೋಟಿ ವ್ಯಾಪಾರಕ್ಕೆ ಕತ್ತು ಬೀಳಲಿದೆ. ಇನ್ನೂ ಈ ಅಭಿಯಾನಕ್ಕೆ ಹಿಂದೂ ಪರ ಸಂಘಟನೆಗಳು ಸಾಥ್ ನೀಡುತ್ತಾರಾ ಕಾದು ನೋಡಬೇಕಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…