Featured

ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ರಾಜ್ಯ ಸರ್ಕಾರ ನಿಷೇಧ – vishwanews24

ಮುಸ್ಲಿಂ ಭಾವನೆಗಳಿಗೆ ಧಕ್ಕೆ : ರಾಜ್ಯದಲ್ಲಿ ಹಮಾರೆ ಬಾರಾಹ್  ಸಿನಿಮಾ ಬಿಡುಗಡೆಗೆ ರಾಜ್ಯ ಸರ್ಕಾರ  ನಿಷೇಧ

ಬೆಂಗಳೂರು: ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಸರ್ಕಾರವು ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆ ಮತ್ತು ಪ್ರಸಾರವನ್ನು ನಿಷೇಧಿಸಿ ಆದೇಶಿಸಿದೆ. ಶುಕ್ರವಾರ (ಇಂದು) ಬಿಡುಗಡೆಯಾಗಬೇಕಿದ್ದ ʻಹಮಾರೆ ಬಾರಹ್‌ʼ ಚಿತ್ರವನ್ನು ಈಗಾಗಲೇ ದೇಶಾದ್ಯಂತ ವಿವಿಧೆಡೆ ನಿಷೇಧಿಸಲಾಗಿದೆ.

ಸಿನಿಮಾ ಟ್ರೈಲರ್‌ನಲ್ಲಿಯೇ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ. ಆದ್ದರಿಂದ ಚಿತ್ರ ಬಿಡುಗಡೆ ಮಾಡದಂತೆ ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಬಿಡುಗಡೆಗೆ ನಿಷೇಧ ಹೇರಿದೆ.

ಸರ್ಕಾರದ ಆದೇಶ ಪ್ರತಿಯಲ್ಲಿ ಏನಿದೆ?
ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದು ʻಹಮಾರೆ ಬಾರಾಹ್ʼ ಎಂಬ ಚಲನಚಿತ್ರದ ಟ್ರೈಲರ್ (Cinema Trailer) ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಷಡ್ಯಂತ್ರವಾಗಿದೆ.

ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್‌ 7 ರಂದು ಬಿಡುಗಡೆಯಾಗಲಿರುವ ʻಹಮಾರೆ ಬಾರಾಹ್ʼ ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಘಟನೆಗಳು ಮನವಿ ಮಾಡಿದ್ದವು.

ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿ ʻಹಮಾರೆ ಬಾರಾಹ್ʼ ಚಲನಚಿತ್ರದಲ್ಲಿ ಪವಿತ್ರ ಗ್ರಂಥ ಕುರಾನ್ ಶರೀಫರಲ್ಲಿ ಇರುವ ಸೂರೆ ಎ ಬಕರ ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಸೃಷ್ಟಿಸಿ, ಪ್ರಚೋದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ, ಕೆಲವು ಧರ್ಮದ ಜನರುಗಳನ್ನು ಕೆರಳಿಸುವ, ದ್ವೇಷ ಭಾವನೆ ಪ್ರಚೋದಿಸುವ ಮತ್ತು ಒಂದು ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸುವ ಪ್ರಯತ್ನದಂತೆ ಕಾಣುತ್ತದೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago