Featured

ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ರಾಜ್ಯ ಸರ್ಕಾರ ನಿಷೇಧ – vishwanews24

ಮುಸ್ಲಿಂ ಭಾವನೆಗಳಿಗೆ ಧಕ್ಕೆ : ರಾಜ್ಯದಲ್ಲಿ ಹಮಾರೆ ಬಾರಾಹ್  ಸಿನಿಮಾ ಬಿಡುಗಡೆಗೆ ರಾಜ್ಯ ಸರ್ಕಾರ  ನಿಷೇಧ

ಬೆಂಗಳೂರು: ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಸರ್ಕಾರವು ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆ ಮತ್ತು ಪ್ರಸಾರವನ್ನು ನಿಷೇಧಿಸಿ ಆದೇಶಿಸಿದೆ. ಶುಕ್ರವಾರ (ಇಂದು) ಬಿಡುಗಡೆಯಾಗಬೇಕಿದ್ದ ʻಹಮಾರೆ ಬಾರಹ್‌ʼ ಚಿತ್ರವನ್ನು ಈಗಾಗಲೇ ದೇಶಾದ್ಯಂತ ವಿವಿಧೆಡೆ ನಿಷೇಧಿಸಲಾಗಿದೆ.

ಸಿನಿಮಾ ಟ್ರೈಲರ್‌ನಲ್ಲಿಯೇ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ. ಆದ್ದರಿಂದ ಚಿತ್ರ ಬಿಡುಗಡೆ ಮಾಡದಂತೆ ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಬಿಡುಗಡೆಗೆ ನಿಷೇಧ ಹೇರಿದೆ.

ಸರ್ಕಾರದ ಆದೇಶ ಪ್ರತಿಯಲ್ಲಿ ಏನಿದೆ?
ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದು ʻಹಮಾರೆ ಬಾರಾಹ್ʼ ಎಂಬ ಚಲನಚಿತ್ರದ ಟ್ರೈಲರ್ (Cinema Trailer) ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಷಡ್ಯಂತ್ರವಾಗಿದೆ.

ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್‌ 7 ರಂದು ಬಿಡುಗಡೆಯಾಗಲಿರುವ ʻಹಮಾರೆ ಬಾರಾಹ್ʼ ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಘಟನೆಗಳು ಮನವಿ ಮಾಡಿದ್ದವು.

ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿ ʻಹಮಾರೆ ಬಾರಾಹ್ʼ ಚಲನಚಿತ್ರದಲ್ಲಿ ಪವಿತ್ರ ಗ್ರಂಥ ಕುರಾನ್ ಶರೀಫರಲ್ಲಿ ಇರುವ ಸೂರೆ ಎ ಬಕರ ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಸೃಷ್ಟಿಸಿ, ಪ್ರಚೋದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ, ಕೆಲವು ಧರ್ಮದ ಜನರುಗಳನ್ನು ಕೆರಳಿಸುವ, ದ್ವೇಷ ಭಾವನೆ ಪ್ರಚೋದಿಸುವ ಮತ್ತು ಒಂದು ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸುವ ಪ್ರಯತ್ನದಂತೆ ಕಾಣುತ್ತದೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago