Featured

ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ರಾಜ್ಯ ಸರ್ಕಾರ ನಿಷೇಧ – vishwanews24

ಮುಸ್ಲಿಂ ಭಾವನೆಗಳಿಗೆ ಧಕ್ಕೆ : ರಾಜ್ಯದಲ್ಲಿ ಹಮಾರೆ ಬಾರಾಹ್  ಸಿನಿಮಾ ಬಿಡುಗಡೆಗೆ ರಾಜ್ಯ ಸರ್ಕಾರ  ನಿಷೇಧ

ಬೆಂಗಳೂರು: ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಸರ್ಕಾರವು ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆ ಮತ್ತು ಪ್ರಸಾರವನ್ನು ನಿಷೇಧಿಸಿ ಆದೇಶಿಸಿದೆ. ಶುಕ್ರವಾರ (ಇಂದು) ಬಿಡುಗಡೆಯಾಗಬೇಕಿದ್ದ ʻಹಮಾರೆ ಬಾರಹ್‌ʼ ಚಿತ್ರವನ್ನು ಈಗಾಗಲೇ ದೇಶಾದ್ಯಂತ ವಿವಿಧೆಡೆ ನಿಷೇಧಿಸಲಾಗಿದೆ.

ಸಿನಿಮಾ ಟ್ರೈಲರ್‌ನಲ್ಲಿಯೇ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ. ಆದ್ದರಿಂದ ಚಿತ್ರ ಬಿಡುಗಡೆ ಮಾಡದಂತೆ ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಬಿಡುಗಡೆಗೆ ನಿಷೇಧ ಹೇರಿದೆ.

ಸರ್ಕಾರದ ಆದೇಶ ಪ್ರತಿಯಲ್ಲಿ ಏನಿದೆ?
ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದು ʻಹಮಾರೆ ಬಾರಾಹ್ʼ ಎಂಬ ಚಲನಚಿತ್ರದ ಟ್ರೈಲರ್ (Cinema Trailer) ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಷಡ್ಯಂತ್ರವಾಗಿದೆ.

ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್‌ 7 ರಂದು ಬಿಡುಗಡೆಯಾಗಲಿರುವ ʻಹಮಾರೆ ಬಾರಾಹ್ʼ ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಘಟನೆಗಳು ಮನವಿ ಮಾಡಿದ್ದವು.

ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿ ʻಹಮಾರೆ ಬಾರಾಹ್ʼ ಚಲನಚಿತ್ರದಲ್ಲಿ ಪವಿತ್ರ ಗ್ರಂಥ ಕುರಾನ್ ಶರೀಫರಲ್ಲಿ ಇರುವ ಸೂರೆ ಎ ಬಕರ ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಸೃಷ್ಟಿಸಿ, ಪ್ರಚೋದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ, ಕೆಲವು ಧರ್ಮದ ಜನರುಗಳನ್ನು ಕೆರಳಿಸುವ, ದ್ವೇಷ ಭಾವನೆ ಪ್ರಚೋದಿಸುವ ಮತ್ತು ಒಂದು ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸುವ ಪ್ರಯತ್ನದಂತೆ ಕಾಣುತ್ತದೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago