ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು`ಸಿದ್ರಾಮುಲ್ಲಾ ಖಾನ್’ ಎಂದು ಕರೆದ್ರೆ ಖುಷಿಯಾಗುತ್ತೆ : ಸಿದ್ದರಾಮಯ್ಯ – Vishwanews24
ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು`ಸಿದ್ರಾಮುಲ್ಲಾ ಖಾನ್’ ಎಂದು ಕರೆದ್ರೆ ಖುಷಿಯಾಗುತ್ತೆ : ಸಿದ್ದರಾಮಯ್ಯ
ಬೆಂಗಳೂರು : ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ನನ್ನನ್ನು ಅನ್ನರಾಮಯ್ಯ, ರೈತ ರಾಮಯ್ಯ, ಕನ್ನಡ ರಾಮಯ್ಯ, ದಲಿತ ರಾಮಯ್ಯ ಎಂದೆಲ್ಲಾ ಜನರು ನನ್ನನ್ನು ಕರೆಯುತ್ತಾರೆ. ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ.
ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ ಇರುವ ಸಂತ ಶಿಶುನಾಳ ಷರೀಪರ ಪರಂಪರೆ ನಮ್ಮದು. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಸಂತ ರಮಾನಂದರ ಶಿಷ್ಯತ್ವವನ್ನು ಒಪ್ಪಿಕೊಂಡು ಜಗಮೆಚ್ಚಿದ ಸೂಫಿ ಕವಿ ಕಬೀರನೂ ನಮ್ಮದೇ ಪರಂಪರೆಯವರು. ಆದ್ದರಿಂದ ಮುಸ್ಲಿಮ್ ಹೆಸರನ್ನು ನನ್ನ ಹೆಸರಿಗೆ ಜೋಡಿಸುವ ಮೂಲಕ ಜಾತ್ಯತೀತತೆಯ ಮೇಲಿನ ನನ್ನ ನಂಬಿಕೆಯನ್ನು ಅವರು ಪುರಸ್ಕರಿಸಿದ್ದಾರೆಂದು ಎಂದು ತಿಳಿದುಕೊಳ್ಳುವೆ ಎಂದಿದ್ದಾರೆ.
ಮುಸ್ಲಿಮ್ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ,ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ದವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ ಎಂದಿದ್ದಾರೆ.
