ಬೆಂಗಳೂರು : ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ನನ್ನನ್ನು ಅನ್ನರಾಮಯ್ಯ, ರೈತ ರಾಮಯ್ಯ, ಕನ್ನಡ ರಾಮಯ್ಯ, ದಲಿತ ರಾಮಯ್ಯ ಎಂದೆಲ್ಲಾ ಜನರು ನನ್ನನ್ನು ಕರೆಯುತ್ತಾರೆ. ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ.
ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ ಇರುವ ಸಂತ ಶಿಶುನಾಳ ಷರೀಪರ ಪರಂಪರೆ ನಮ್ಮದು. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಸಂತ ರಮಾನಂದರ ಶಿಷ್ಯತ್ವವನ್ನು ಒಪ್ಪಿಕೊಂಡು ಜಗಮೆಚ್ಚಿದ ಸೂಫಿ ಕವಿ ಕಬೀರನೂ ನಮ್ಮದೇ ಪರಂಪರೆಯವರು. ಆದ್ದರಿಂದ ಮುಸ್ಲಿಮ್ ಹೆಸರನ್ನು ನನ್ನ ಹೆಸರಿಗೆ ಜೋಡಿಸುವ ಮೂಲಕ ಜಾತ್ಯತೀತತೆಯ ಮೇಲಿನ ನನ್ನ ನಂಬಿಕೆಯನ್ನು ಅವರು ಪುರಸ್ಕರಿಸಿದ್ದಾರೆಂದು ಎಂದು ತಿಳಿದುಕೊಳ್ಳುವೆ ಎಂದಿದ್ದಾರೆ.
ಮುಸ್ಲಿಮ್ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ,ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ದವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…