Featured

ಮುಸ್ಲಿಂ ಸಮುದಾಯದ ಪ್ರಜ್ಞಾವಂತ ನಾಯಕರು ಉಗ್ರವಾದವನ್ನು ವಿರೋಧಿಸಬೇಕು : ಮೋಹನ್‌ ಭಾಗವತ್ -Vishwanews24

ಮುಸ್ಲಿಂ ಸಮುದಾಯದ ಪ್ರಜ್ಞಾವಂತ ನಾಯಕರು ಉಗ್ರವಾದವನ್ನು ವಿರೋಧಿಸಬೇಕು : ಮೋಹನ್‌ ಭಾಗವತ್ -Vishwanews24

ಪುಣೆ : ಮುಸ್ಲಿಂ ನಾಯಕರಿಗೆ ಮೂಲಭೂತವಾದದ ವಿರುದ್ಧ ದೃಢವಾದ ನಿಲುವು ಕೈಗೊಳ್ಳುವಂತೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್‌ ಭಾಗವತ್ ಕರೆ ನೀಡಿದ್ದಾರೆ.

ಪುಣೆಯಲ್ಲಿ ಗ್ಲೋಬಲ್ ಸ್ಟ್ರಾಟೆಜಿಕ್‌ ಪಾಲಿಸಿ ಫೌಂಡೇಶನ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮುಸ್ಲಿಂ ಸಮುದಾಯದ ಪ್ರಜ್ಞಾವಂತ ನಾಯಕರು ಉಗ್ರವಾದವನ್ನು ವಿರೋಧಿಸಬೇಕು. ಮತಾಂಧರ ವಿರುದ್ದ ಅವರು ದೃಢವಾಗಿ ಮಾತನಾಡಬೇಕು. ಈ ಕಾರ್ಯಕ್ಕೆ ದೀರ್ಘ ಪ್ರಯತ್ನ ಹಾಗೂ ತಾಳ್ಮೆಯ ಅಗತ್ಯ ಇದೆ. ನಮಗೆಲ್ಲರಿಗೂ ಇದು ದೀರ್ಘ ಹಾಗೂ ಕಠಿಣವಾದ ಪರೀಕ್ಷೆಯಾಗಿದೆ. ಈ ಪ್ರಯತ್ನವನ್ನು ನಾವು ಎಷ್ಟು ಬೇಗ ಆರಂಭಿಸುತ್ತೇವೆಯೋ ಅದು ನಮ್ಮ ಸಮಾಜಕ್ಕೆ ಕಡಿಮೆ ಹಾನಿ ಮಾಡುತ್ತದೆ” ಎಂದಿದ್ದಾರೆ

“ಭಾರತದಲ್ಲಿ ವಾಸಿಸುವ ಹಿಂದೂಗಳು ಹಾಗೂ ಮುಸ್ಲಿಂಮರು ಒಂದೇ ಆಗಿದ್ದಾರೆ. ಪ್ರತಿಯೋರ್ವ ಭಾರತೀಯನು ಹಿಂದೂ. ದೇಶದ ಸಂವೇದನಾಶೀಲ ಮುಸ್ಲಿಂ ನಾಯಕರು ಮೂಲಭೂತವಾದಿಗಳ ವಿರುದ್ದ ದೃಢವಾಗಿ ಎದ್ದುನಿಲ್ಲಬೇಕು” ಎಂದು ಹೇಳಿದ್ದಾರೆ.

“ಭಾರತದಲ್ಲಿ ಅಲ್ಪಸಂಖ್ಯಾತರು ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ. ಏಕೆಂದರೆ, ಹಿಂದೂಗಳು ಯಾರೊಂದಿಗೂ ಕೂಡಾ ದ್ವೇಷ ಕಟ್ಟಿಕೊಳ್ಳುವುದಿಲ್ಲ. ಮುಸ್ಲಿಂ ಪ್ರಾಬಲ್ಯದ ಬಗ್ಗೆ ಯೋಚಿಸಬೇಕಿಲ್ಲ. ಆದರೆ, ಭಾರತದ ಪ್ರಾಬಲ್ಯದ ಕುರಿತು ಖಂಡಿತವಾಗಿ ನಾವು ಯೋಚಿಸಬೇಕಿದೆ. ಭಾರತದ ಸರ್ವತೋಮುಖ ಬೆಳವಣಿಗೆಗಾಗಿ ಎಲ್ಲರೂ ಜೊತೆಯಾಗಿ ಶ್ರಮಿಸಬೇಕಿದೆ” ಎಂದು ತಿಳಿಸಿದ್ದಾರೆ.

“ಇಸ್ಲಾಂ ಎನ್ನುವುದು ಭಾರತಕ್ಕೆ ಆಕ್ರಮಣಕಾರರೊಂದಿಗೆ ಬಂದಿದ್ದು, ಇದು ಇತಿಹಾಸ ಕೂಡಾ ಹೌದು. ಬುದ್ದಿವಂತ ಮುಸ್ಲಿಂ ನಾಯಕರು ಅನಗತ್ಯವಾದ ಸಮಸ್ಯೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

20 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

21 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

22 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

22 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago