ಪುಣೆ : ಮುಸ್ಲಿಂ ನಾಯಕರಿಗೆ ಮೂಲಭೂತವಾದದ ವಿರುದ್ಧ ದೃಢವಾದ ನಿಲುವು ಕೈಗೊಳ್ಳುವಂತೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ.
ಪುಣೆಯಲ್ಲಿ ಗ್ಲೋಬಲ್ ಸ್ಟ್ರಾಟೆಜಿಕ್ ಪಾಲಿಸಿ ಫೌಂಡೇಶನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮುಸ್ಲಿಂ ಸಮುದಾಯದ ಪ್ರಜ್ಞಾವಂತ ನಾಯಕರು ಉಗ್ರವಾದವನ್ನು ವಿರೋಧಿಸಬೇಕು. ಮತಾಂಧರ ವಿರುದ್ದ ಅವರು ದೃಢವಾಗಿ ಮಾತನಾಡಬೇಕು. ಈ ಕಾರ್ಯಕ್ಕೆ ದೀರ್ಘ ಪ್ರಯತ್ನ ಹಾಗೂ ತಾಳ್ಮೆಯ ಅಗತ್ಯ ಇದೆ. ನಮಗೆಲ್ಲರಿಗೂ ಇದು ದೀರ್ಘ ಹಾಗೂ ಕಠಿಣವಾದ ಪರೀಕ್ಷೆಯಾಗಿದೆ. ಈ ಪ್ರಯತ್ನವನ್ನು ನಾವು ಎಷ್ಟು ಬೇಗ ಆರಂಭಿಸುತ್ತೇವೆಯೋ ಅದು ನಮ್ಮ ಸಮಾಜಕ್ಕೆ ಕಡಿಮೆ ಹಾನಿ ಮಾಡುತ್ತದೆ” ಎಂದಿದ್ದಾರೆ
“ಭಾರತದಲ್ಲಿ ವಾಸಿಸುವ ಹಿಂದೂಗಳು ಹಾಗೂ ಮುಸ್ಲಿಂಮರು ಒಂದೇ ಆಗಿದ್ದಾರೆ. ಪ್ರತಿಯೋರ್ವ ಭಾರತೀಯನು ಹಿಂದೂ. ದೇಶದ ಸಂವೇದನಾಶೀಲ ಮುಸ್ಲಿಂ ನಾಯಕರು ಮೂಲಭೂತವಾದಿಗಳ ವಿರುದ್ದ ದೃಢವಾಗಿ ಎದ್ದುನಿಲ್ಲಬೇಕು” ಎಂದು ಹೇಳಿದ್ದಾರೆ.
“ಭಾರತದಲ್ಲಿ ಅಲ್ಪಸಂಖ್ಯಾತರು ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ. ಏಕೆಂದರೆ, ಹಿಂದೂಗಳು ಯಾರೊಂದಿಗೂ ಕೂಡಾ ದ್ವೇಷ ಕಟ್ಟಿಕೊಳ್ಳುವುದಿಲ್ಲ. ಮುಸ್ಲಿಂ ಪ್ರಾಬಲ್ಯದ ಬಗ್ಗೆ ಯೋಚಿಸಬೇಕಿಲ್ಲ. ಆದರೆ, ಭಾರತದ ಪ್ರಾಬಲ್ಯದ ಕುರಿತು ಖಂಡಿತವಾಗಿ ನಾವು ಯೋಚಿಸಬೇಕಿದೆ. ಭಾರತದ ಸರ್ವತೋಮುಖ ಬೆಳವಣಿಗೆಗಾಗಿ ಎಲ್ಲರೂ ಜೊತೆಯಾಗಿ ಶ್ರಮಿಸಬೇಕಿದೆ” ಎಂದು ತಿಳಿಸಿದ್ದಾರೆ.
“ಇಸ್ಲಾಂ ಎನ್ನುವುದು ಭಾರತಕ್ಕೆ ಆಕ್ರಮಣಕಾರರೊಂದಿಗೆ ಬಂದಿದ್ದು, ಇದು ಇತಿಹಾಸ ಕೂಡಾ ಹೌದು. ಬುದ್ದಿವಂತ ಮುಸ್ಲಿಂ ನಾಯಕರು ಅನಗತ್ಯವಾದ ಸಮಸ್ಯೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…