ಪುಣೆ : ಮುಸ್ಲಿಂ ನಾಯಕರಿಗೆ ಮೂಲಭೂತವಾದದ ವಿರುದ್ಧ ದೃಢವಾದ ನಿಲುವು ಕೈಗೊಳ್ಳುವಂತೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ.
ಪುಣೆಯಲ್ಲಿ ಗ್ಲೋಬಲ್ ಸ್ಟ್ರಾಟೆಜಿಕ್ ಪಾಲಿಸಿ ಫೌಂಡೇಶನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮುಸ್ಲಿಂ ಸಮುದಾಯದ ಪ್ರಜ್ಞಾವಂತ ನಾಯಕರು ಉಗ್ರವಾದವನ್ನು ವಿರೋಧಿಸಬೇಕು. ಮತಾಂಧರ ವಿರುದ್ದ ಅವರು ದೃಢವಾಗಿ ಮಾತನಾಡಬೇಕು. ಈ ಕಾರ್ಯಕ್ಕೆ ದೀರ್ಘ ಪ್ರಯತ್ನ ಹಾಗೂ ತಾಳ್ಮೆಯ ಅಗತ್ಯ ಇದೆ. ನಮಗೆಲ್ಲರಿಗೂ ಇದು ದೀರ್ಘ ಹಾಗೂ ಕಠಿಣವಾದ ಪರೀಕ್ಷೆಯಾಗಿದೆ. ಈ ಪ್ರಯತ್ನವನ್ನು ನಾವು ಎಷ್ಟು ಬೇಗ ಆರಂಭಿಸುತ್ತೇವೆಯೋ ಅದು ನಮ್ಮ ಸಮಾಜಕ್ಕೆ ಕಡಿಮೆ ಹಾನಿ ಮಾಡುತ್ತದೆ” ಎಂದಿದ್ದಾರೆ
“ಭಾರತದಲ್ಲಿ ವಾಸಿಸುವ ಹಿಂದೂಗಳು ಹಾಗೂ ಮುಸ್ಲಿಂಮರು ಒಂದೇ ಆಗಿದ್ದಾರೆ. ಪ್ರತಿಯೋರ್ವ ಭಾರತೀಯನು ಹಿಂದೂ. ದೇಶದ ಸಂವೇದನಾಶೀಲ ಮುಸ್ಲಿಂ ನಾಯಕರು ಮೂಲಭೂತವಾದಿಗಳ ವಿರುದ್ದ ದೃಢವಾಗಿ ಎದ್ದುನಿಲ್ಲಬೇಕು” ಎಂದು ಹೇಳಿದ್ದಾರೆ.
“ಭಾರತದಲ್ಲಿ ಅಲ್ಪಸಂಖ್ಯಾತರು ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ. ಏಕೆಂದರೆ, ಹಿಂದೂಗಳು ಯಾರೊಂದಿಗೂ ಕೂಡಾ ದ್ವೇಷ ಕಟ್ಟಿಕೊಳ್ಳುವುದಿಲ್ಲ. ಮುಸ್ಲಿಂ ಪ್ರಾಬಲ್ಯದ ಬಗ್ಗೆ ಯೋಚಿಸಬೇಕಿಲ್ಲ. ಆದರೆ, ಭಾರತದ ಪ್ರಾಬಲ್ಯದ ಕುರಿತು ಖಂಡಿತವಾಗಿ ನಾವು ಯೋಚಿಸಬೇಕಿದೆ. ಭಾರತದ ಸರ್ವತೋಮುಖ ಬೆಳವಣಿಗೆಗಾಗಿ ಎಲ್ಲರೂ ಜೊತೆಯಾಗಿ ಶ್ರಮಿಸಬೇಕಿದೆ” ಎಂದು ತಿಳಿಸಿದ್ದಾರೆ.
“ಇಸ್ಲಾಂ ಎನ್ನುವುದು ಭಾರತಕ್ಕೆ ಆಕ್ರಮಣಕಾರರೊಂದಿಗೆ ಬಂದಿದ್ದು, ಇದು ಇತಿಹಾಸ ಕೂಡಾ ಹೌದು. ಬುದ್ದಿವಂತ ಮುಸ್ಲಿಂ ನಾಯಕರು ಅನಗತ್ಯವಾದ ಸಮಸ್ಯೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…