ಮಂಗಳೂರು : ಮುಸ್ಲಿಂ ಹುಡುಗನಿಂದ ಹಿಂದೂ ಹುಡುಗಿ ಅತ್ಯಾಚಾರಕ್ಕೊಳಗಾದರೆ ಸಂಘಕ್ಕೆ ಆಗುವಷ್ಟು ಖುಷಿ ಯಾರಿಗೂ ಆಗಲ್ಲ ಎಂದು ಭಜರಂಗದಳದ ಮಾಜಿ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ಜನನುಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಮನಿಂದ ಅತ್ಯಾಚಾರವಾದರೆ ಸಂಘಪರಿವಾರ ಅದರಲ್ಲೇ ಬೆಳೆ ಬೇಯಿಸುತ್ತದೆ. ಆರ್.ಎಸ್.ಎಸ್. ಸಂಘಟನೆ ದಲಿತರ, ಹಿಂದೂ ಸಮಾಜದ ಪರವಾಗಿಲ್ಲ. ಶೋಷಣೆ ವಿರುದ್ಧ ಧ್ವನಿ ಎತ್ತುವುದು ನಿಜವಾದ ಹಿಂದುತ್ವವಾಗಿದೆ. ಆರ್.ಎಸ್.ಎಸ್. ಬಜರಂಗದಳ, ವಿಹೆಚ್ ಪಿ ಹಿಂದೂ ಸಮಾಜ ಅಲ್ಲ. ಬಿಜೆಪಿ ಬತ್ತಳಿಕೆಯಲ್ಲಿ ಎಲ್ಲವೂ ಖಾಲಿಯಾದಾಗ ಅಯೋಧ್ಯೆ ವಿಚಾರವನ್ನು ಮುಂದೆ ಬರುತ್ತದೆ. ಸಂಘ ಪರಿವಾರದಲ್ಲಿರುವ ಜಾತಿ ಅಸ್ಪೃಶ್ಯತೆಯಿಂದಾಗಿ ನಾನು ಸಂಘ ಸಿದ್ಧಾಂತದಿಂದ ವಿಮುಖನಾಗಲು ಒಂದು ಕಾರಣ ಎಂದು ಹೇಳಿದರು.
ದೇಶದಲ್ಲಿ ಹಿಂದೂ ವಿರೋಧಿಯಾಗಿರುವ ಸಂಘಟನೆಯಿದ್ದರೆ ಅದು ಆರ್ಎಸ್ಎಸ್. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗುರಿ ಬಿಜೆಪಿ ಅಲ್ಲದೆ ಮತ್ತೇನೂ ಅಲ್ಲ. ಸಂಘದ ವ್ಯಾಪ್ತಿಯಲ್ಲಿರುವ ನೂರಾರು ಸಂಘಟನೆಗಳ ಮೂಲಕ ಕೆಲಸಗಳನ್ನು ಮಾಡಿಸಿಕೊಳ್ಳುತ್ತ ಬಿಜೆಪಿಗೆ ಅಧಿಕಾರ ತಂದುಕೊಡುವುದೇ ಸಂಘದ ಕೆಲಸ.
ಮುಸ್ಲಿಮರನ್ನು ಧರ್ಮದ ಕಾರಣಕ್ಕಾಗಿ ದ್ವೇಷ ಮಾಡುವುದಾದರೆ ಅದು ನಿಜವಾದ ದೇಶದ್ರೋಹ ಎಂದು ಈ ಸಂದರ್ಭದಲ್ಲಿ ಹೇಳಿದರು…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…