ಮಂಗಳೂರು : ಮುಸ್ಲಿಂ ಹುಡುಗನಿಂದ ಹಿಂದೂ ಹುಡುಗಿ ಅತ್ಯಾಚಾರಕ್ಕೊಳಗಾದರೆ ಸಂಘಕ್ಕೆ ಆಗುವಷ್ಟು ಖುಷಿ ಯಾರಿಗೂ ಆಗಲ್ಲ ಎಂದು ಭಜರಂಗದಳದ ಮಾಜಿ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ಜನನುಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಮನಿಂದ ಅತ್ಯಾಚಾರವಾದರೆ ಸಂಘಪರಿವಾರ ಅದರಲ್ಲೇ ಬೆಳೆ ಬೇಯಿಸುತ್ತದೆ. ಆರ್.ಎಸ್.ಎಸ್. ಸಂಘಟನೆ ದಲಿತರ, ಹಿಂದೂ ಸಮಾಜದ ಪರವಾಗಿಲ್ಲ. ಶೋಷಣೆ ವಿರುದ್ಧ ಧ್ವನಿ ಎತ್ತುವುದು ನಿಜವಾದ ಹಿಂದುತ್ವವಾಗಿದೆ. ಆರ್.ಎಸ್.ಎಸ್. ಬಜರಂಗದಳ, ವಿಹೆಚ್ ಪಿ ಹಿಂದೂ ಸಮಾಜ ಅಲ್ಲ. ಬಿಜೆಪಿ ಬತ್ತಳಿಕೆಯಲ್ಲಿ ಎಲ್ಲವೂ ಖಾಲಿಯಾದಾಗ ಅಯೋಧ್ಯೆ ವಿಚಾರವನ್ನು ಮುಂದೆ ಬರುತ್ತದೆ. ಸಂಘ ಪರಿವಾರದಲ್ಲಿರುವ ಜಾತಿ ಅಸ್ಪೃಶ್ಯತೆಯಿಂದಾಗಿ ನಾನು ಸಂಘ ಸಿದ್ಧಾಂತದಿಂದ ವಿಮುಖನಾಗಲು ಒಂದು ಕಾರಣ ಎಂದು ಹೇಳಿದರು.
ದೇಶದಲ್ಲಿ ಹಿಂದೂ ವಿರೋಧಿಯಾಗಿರುವ ಸಂಘಟನೆಯಿದ್ದರೆ ಅದು ಆರ್ಎಸ್ಎಸ್. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗುರಿ ಬಿಜೆಪಿ ಅಲ್ಲದೆ ಮತ್ತೇನೂ ಅಲ್ಲ. ಸಂಘದ ವ್ಯಾಪ್ತಿಯಲ್ಲಿರುವ ನೂರಾರು ಸಂಘಟನೆಗಳ ಮೂಲಕ ಕೆಲಸಗಳನ್ನು ಮಾಡಿಸಿಕೊಳ್ಳುತ್ತ ಬಿಜೆಪಿಗೆ ಅಧಿಕಾರ ತಂದುಕೊಡುವುದೇ ಸಂಘದ ಕೆಲಸ.
ಮುಸ್ಲಿಮರನ್ನು ಧರ್ಮದ ಕಾರಣಕ್ಕಾಗಿ ದ್ವೇಷ ಮಾಡುವುದಾದರೆ ಅದು ನಿಜವಾದ ದೇಶದ್ರೋಹ ಎಂದು ಈ ಸಂದರ್ಭದಲ್ಲಿ ಹೇಳಿದರು…
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…