ಮಂಗಳೂರು : ಮುಸ್ಲಿಂ ಹುಡುಗನಿಂದ ಹಿಂದೂ ಹುಡುಗಿ ಅತ್ಯಾಚಾರಕ್ಕೊಳಗಾದರೆ ಸಂಘಕ್ಕೆ ಆಗುವಷ್ಟು ಖುಷಿ ಯಾರಿಗೂ ಆಗಲ್ಲ ಎಂದು ಭಜರಂಗದಳದ ಮಾಜಿ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ಜನನುಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಮನಿಂದ ಅತ್ಯಾಚಾರವಾದರೆ ಸಂಘಪರಿವಾರ ಅದರಲ್ಲೇ ಬೆಳೆ ಬೇಯಿಸುತ್ತದೆ. ಆರ್.ಎಸ್.ಎಸ್. ಸಂಘಟನೆ ದಲಿತರ, ಹಿಂದೂ ಸಮಾಜದ ಪರವಾಗಿಲ್ಲ. ಶೋಷಣೆ ವಿರುದ್ಧ ಧ್ವನಿ ಎತ್ತುವುದು ನಿಜವಾದ ಹಿಂದುತ್ವವಾಗಿದೆ. ಆರ್.ಎಸ್.ಎಸ್. ಬಜರಂಗದಳ, ವಿಹೆಚ್ ಪಿ ಹಿಂದೂ ಸಮಾಜ ಅಲ್ಲ. ಬಿಜೆಪಿ ಬತ್ತಳಿಕೆಯಲ್ಲಿ ಎಲ್ಲವೂ ಖಾಲಿಯಾದಾಗ ಅಯೋಧ್ಯೆ ವಿಚಾರವನ್ನು ಮುಂದೆ ಬರುತ್ತದೆ. ಸಂಘ ಪರಿವಾರದಲ್ಲಿರುವ ಜಾತಿ ಅಸ್ಪೃಶ್ಯತೆಯಿಂದಾಗಿ ನಾನು ಸಂಘ ಸಿದ್ಧಾಂತದಿಂದ ವಿಮುಖನಾಗಲು ಒಂದು ಕಾರಣ ಎಂದು ಹೇಳಿದರು.
ದೇಶದಲ್ಲಿ ಹಿಂದೂ ವಿರೋಧಿಯಾಗಿರುವ ಸಂಘಟನೆಯಿದ್ದರೆ ಅದು ಆರ್ಎಸ್ಎಸ್. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗುರಿ ಬಿಜೆಪಿ ಅಲ್ಲದೆ ಮತ್ತೇನೂ ಅಲ್ಲ. ಸಂಘದ ವ್ಯಾಪ್ತಿಯಲ್ಲಿರುವ ನೂರಾರು ಸಂಘಟನೆಗಳ ಮೂಲಕ ಕೆಲಸಗಳನ್ನು ಮಾಡಿಸಿಕೊಳ್ಳುತ್ತ ಬಿಜೆಪಿಗೆ ಅಧಿಕಾರ ತಂದುಕೊಡುವುದೇ ಸಂಘದ ಕೆಲಸ.
ಮುಸ್ಲಿಮರನ್ನು ಧರ್ಮದ ಕಾರಣಕ್ಕಾಗಿ ದ್ವೇಷ ಮಾಡುವುದಾದರೆ ಅದು ನಿಜವಾದ ದೇಶದ್ರೋಹ ಎಂದು ಈ ಸಂದರ್ಭದಲ್ಲಿ ಹೇಳಿದರು…
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…