ಮಂಗಳೂರು : ಮುಸ್ಲಿಂ ಹುಡುಗನಿಂದ ಹಿಂದೂ ಹುಡುಗಿ ಅತ್ಯಾಚಾರಕ್ಕೊಳಗಾದರೆ ಸಂಘಕ್ಕೆ ಆಗುವಷ್ಟು ಖುಷಿ ಯಾರಿಗೂ ಆಗಲ್ಲ ಎಂದು ಭಜರಂಗದಳದ ಮಾಜಿ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ಜನನುಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಮನಿಂದ ಅತ್ಯಾಚಾರವಾದರೆ ಸಂಘಪರಿವಾರ ಅದರಲ್ಲೇ ಬೆಳೆ ಬೇಯಿಸುತ್ತದೆ. ಆರ್.ಎಸ್.ಎಸ್. ಸಂಘಟನೆ ದಲಿತರ, ಹಿಂದೂ ಸಮಾಜದ ಪರವಾಗಿಲ್ಲ. ಶೋಷಣೆ ವಿರುದ್ಧ ಧ್ವನಿ ಎತ್ತುವುದು ನಿಜವಾದ ಹಿಂದುತ್ವವಾಗಿದೆ. ಆರ್.ಎಸ್.ಎಸ್. ಬಜರಂಗದಳ, ವಿಹೆಚ್ ಪಿ ಹಿಂದೂ ಸಮಾಜ ಅಲ್ಲ. ಬಿಜೆಪಿ ಬತ್ತಳಿಕೆಯಲ್ಲಿ ಎಲ್ಲವೂ ಖಾಲಿಯಾದಾಗ ಅಯೋಧ್ಯೆ ವಿಚಾರವನ್ನು ಮುಂದೆ ಬರುತ್ತದೆ. ಸಂಘ ಪರಿವಾರದಲ್ಲಿರುವ ಜಾತಿ ಅಸ್ಪೃಶ್ಯತೆಯಿಂದಾಗಿ ನಾನು ಸಂಘ ಸಿದ್ಧಾಂತದಿಂದ ವಿಮುಖನಾಗಲು ಒಂದು ಕಾರಣ ಎಂದು ಹೇಳಿದರು.
ದೇಶದಲ್ಲಿ ಹಿಂದೂ ವಿರೋಧಿಯಾಗಿರುವ ಸಂಘಟನೆಯಿದ್ದರೆ ಅದು ಆರ್ಎಸ್ಎಸ್. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗುರಿ ಬಿಜೆಪಿ ಅಲ್ಲದೆ ಮತ್ತೇನೂ ಅಲ್ಲ. ಸಂಘದ ವ್ಯಾಪ್ತಿಯಲ್ಲಿರುವ ನೂರಾರು ಸಂಘಟನೆಗಳ ಮೂಲಕ ಕೆಲಸಗಳನ್ನು ಮಾಡಿಸಿಕೊಳ್ಳುತ್ತ ಬಿಜೆಪಿಗೆ ಅಧಿಕಾರ ತಂದುಕೊಡುವುದೇ ಸಂಘದ ಕೆಲಸ.
ಮುಸ್ಲಿಮರನ್ನು ಧರ್ಮದ ಕಾರಣಕ್ಕಾಗಿ ದ್ವೇಷ ಮಾಡುವುದಾದರೆ ಅದು ನಿಜವಾದ ದೇಶದ್ರೋಹ ಎಂದು ಈ ಸಂದರ್ಭದಲ್ಲಿ ಹೇಳಿದರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…